ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಪ್ರತಿಭಟನೆ ಇಂದು

Last Updated 3 ಫೆಬ್ರುವರಿ 2019, 19:05 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರಪತಿ ಮಹಾತ್ಮಗಾಂಧಿ ಅವರ ಸಾವನ್ನು ಸಂಭ್ರಮಿಸಿರುವ ಹಿಂದೂ ಮಹಾಸಭಾದ ಕೃತ್ಯವನ್ನು ಖಂಡಿಸಿ ರಾಜ್ಯದಾದ್ಯಂತ ಸೋಮವಾರ(ಫೆ. 4) ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

‘ಮಹಾತ್ಮರು ಹುತಾತ್ಮರಾದ ದಿನ (ಜನವರಿ 30) ಹಿಂದೂ ಮಹಾಸಭಾ ಅವರ ಸಾವನ್ನು ಸಂಭ್ರಮಿಸಿದೆ.

ಈ ಸಮಯದಲ್ಲಿ ಆ ಸಂಘಟನೆಯ ನಾಯಕಿ ಗಾಂಧೀಜಿಯವರ ಪ್ರತಿಕೃತಿಗೆ ಗುಂಡಿಕ್ಕಿ ವಿಕೃತಿ ಮೆರೆದಿದ್ದಾಳೆ’ ಎಂದು ಅವರು ಕಿಡಿಕಾರಿದರು.

ಹಿಂದೂ ಮಹಾಸಭಾ ಮಾಡುತ್ತಿರುವ ಕೆಲಸಗಳಿಗೆ ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ಬೆಂಬಲವಿದೆ. ಈ ಕಾರಣದಿಂದಾಗಿಯೇ ಆ ಸಂಘಟನೆ ಬಹಿರಂಗವಾಗಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಹಿಂದೂ ಮಹಾಸಭಾ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT