ಸಭೆಯಲ್ಲಿ ಮಾತನಾಡಿದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ‘ಪ್ರಧಾನಿ ಯಾರ ಜೊತೆಗೂ ಚರ್ಚಿಸದೆ, ಏಕಮುಖವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿ, ಕೊರೊನಾ ಸೋಂಕು ವ್ಯಾಪಕವಾಗಿದ್ದು ಆರ್ಥಿಕ ಪರಿಸ್ಥಿತಿ ಪಾತಾಳ ತಲುಪಿದೆ. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಸಂಘಟಿತ, ಅಸಂಘಟಿತ ವಲಯದ ಕಾರ್ಮಿಕರು, ರೈತರು, ಕಾಯಕ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ’ ಎಂದರು.