ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಸಿಎಂ ಆಗಲು ಒಪ್ಪದ ಕಾಂಗ್ರೆಸ್‌: ಎಚ್‌ಡಿಡಿ

Last Updated 6 ಮಾರ್ಚ್ 2020, 9:20 IST
ಅಕ್ಷರ ಗಾತ್ರ

ರಾಮನಗರ: ‘ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಮಾಡುವಂತೆ ನಾನುಮೈತ್ರಿ ಸರ್ಕಾರ ರಚನೆ ವೇಳೆ ಹೇಳಿದ್ದೆ. ಆದರೆ, ಕೇಂದ್ರ ಕಾಂಗ್ರೆಸ್ ನಾಯಕರು ಖರ್ಗೆ ಸಿಎಂ ಆಗಲು ಒಪ್ಪಲಿಲ್ಲ’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಕಾಂಗ್ರೆಸ್‌ ನಾಯಕರ ಒತ್ತಾಸೆಯಂತೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ನಾವು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ರಾಜಕೀಯ ಏಳುಬೀಳುಗಳ ಮಧ್ಯೆ ಮೈತ್ರಿ ಸರ್ಕಾರ ಬಿದ್ದು ಹೋಯಿತು’ ಎಂದು ಅವರು ಹೇಳಿದರು.

‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸುವ ಛಲ, ಹಟವಿದೆ. ಸಾಯುವವರೆಗೂ ಕೂಡಾ ಪಕ್ಷ ಸಂಘಟನೆ ಮಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT