ರಾಮನಗರ: ‘ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಮಾಡುವಂತೆ ನಾನುಮೈತ್ರಿ ಸರ್ಕಾರ ರಚನೆ ವೇಳೆ ಹೇಳಿದ್ದೆ. ಆದರೆ, ಕೇಂದ್ರ ಕಾಂಗ್ರೆಸ್ ನಾಯಕರು ಖರ್ಗೆ ಸಿಎಂ ಆಗಲು ಒಪ್ಪಲಿಲ್ಲ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ‘ಕೇಂದ್ರದ ಕಾಂಗ್ರೆಸ್ ನಾಯಕರ ಒತ್ತಾಸೆಯಂತೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ನಾವು ಯಾವತ್ತೂ ಅಧಿಕಾರವನ್ನು ಕೇಳಿಲ್ಲ. ರಾಜಕೀಯ ಏಳುಬೀಳುಗಳ ಮಧ್ಯೆ ಮೈತ್ರಿ ಸರ್ಕಾರ ಬಿದ್ದು ಹೋಯಿತು’ ಎಂದು ಅವರು ಹೇಳಿದರು.
‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಉಳಿಸುವ ಛಲ, ಹಟವಿದೆ. ಸಾಯುವವರೆಗೂ ಕೂಡಾ ಪಕ್ಷ ಸಂಘಟನೆ ಮಾಡುತ್ತೇನೆ’ ಎಂದರು.