<p><strong>ಬೆಂಗಳೂರು</strong>: ಎಚ್.ಎಸ್.ದೊರೆಸ್ವಾಮಿ ಅವರನ್ನು ‘ನಕಲಿ ಸ್ವಾತಂತ್ರ್ಯ ಹೋರಾಟಗಾರ’ ಎಂದು ಟೀಕಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ವಿಧಾನ ಮಂಡಲದ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಸಿದರು.</p>.<p>ವಿಧಾನಸೌಧ ಆವರಣದಲ್ಲಿ ಇರುವ ಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಯತ್ನಾಳ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವವರೆಗೂಹೋರಾಟ ಮುಂದುವರಿಸಲು ನಿರ್ಧರಿಸಿದರು.</p>.<p>‘ದೊರೆಸ್ವಾಮಿ ಅವರ ಪಾದ ಮುಟ್ಟಿ ಯತ್ನಾಳ ಕ್ಷಮೆ ಕೇಳಬೇಕು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ಶಾಸಕ ಸ್ಥಾನ ರದ್ದುಪಡಿಸಲು ಕ್ರಮಕೈಗೊಂಡು, ಪಕ್ಷದಿಂದ ಉಚ್ಚಾಟಿಸಬೇಕು. ಕ್ರಮ ಜರುಗಿಸದಿದ್ದರೆ ವಿಧಾನಸಭೆ ಅಧಿವೇಶನಕ್ಕೂ ಬರಲು ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ಯತ್ನಾಳ ಹೇಳಿಕೆ ಹಿಂದೆ ಸಂಘ ಪರಿವಾರ, ಬಿಜೆಪಿಯವರ ಚಿತಾವಣೆ ಇದೆ. ದೊರೆಸ್ವಾಮಿ ಅವರನ್ನು ಟೀಕಿಸುವ ಮೂಲಕ ಇಡೀ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಕ್ರಮ ಜರುಗಿಸುವವರೆಗೂ ಹೋರಾಟ ನಿಲ್ಲದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಶಾಸಕರಾದ ಜಿ.ಪರಮೇಶ್ವರ, ಎಚ್.ಕೆ.ಪಾಟೀಲ, ಕೆ.ಆರ್. ರಮೇಶ್ ಕುಮಾರ್, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಿಪಿಎಂ ಮುಖಂಡ ಜಿ.ಎನ್.ನಾಗರಾಜ್ ಸಹ ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.</p>.<p><strong>‘ದೊರೆಸ್ವಾಮಿ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಲಿ’( ಕೊಪ್ಪಳ ವರದಿ):</strong> ‘ಶಾಸಕಬಸನಗೌಡ ಪಾಟೀಲ ಯತ್ನಾಳ ಆಡಿರುವ ಮಾತಿಗೆ ಎಚ್.ಎಸ್.ದೊರೆಸ್ವಾಮಿ ಅವರೇ ಕಾರಣ. ಶತಾಯುಷಿಯಾಗಿರುವ ದೊರೆಸ್ವಾಮಿತಮ್ಮ ನಾಲಿಗೆಯನ್ನು ಹಿಡಿತದಲ್ಲಿಟ್ಟಕೊಳ್ಳಬೇಕು’ ಎಂದು ವಸತಿ ಸಚಿವ ವಿ.ಸೋಮಣ್ಣ ಹರಿಹಾಯ್ದರು.</p>.<p>‘ಹಿರಿಯರಾದವರು ಅಳೆದು ತೂಗಿ ಮಾತನಾಡಿದರೆ ಯಾವುದೇ ತರಹದ ವಿರೋಧ ಇರಲ್ಲ. ಅವರು ಮಾರ್ಗದರ್ಶನ ಮಾಡಿ, ನಮ್ಮನ್ನು ತಿದ್ದಬೇಕು’ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.</p>.<p><strong>ಯತ್ನಾಳ ಆರೋಪಕ್ಕೆ ಸಾಣೇಹಳ್ಳಿ ಶ್ರೀ ಅಸಮಾಧಾನ(ಚಿತ್ರದುರ್ಗ ವರದಿ)</strong>: ಶಾಸಕ ಯತ್ನಾಳ ಮಾಡಿದ ಆರೋಪಕ್ಕೆ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಸ್ವಾಮೀಜಿ ಆಡಿದ ಮಾತುಗಳ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ<br />ಹರಿದಾಡುತ್ತಿದೆ. ‘ದೊರೆಸ್ವಾಮಿ ಅವರಂತಹ ಹಿರಿಯ ಜೀವಿಗಳು ಆನೆ ಇದ್ದಂತೆ. ಆನೆ ನಡೆದಾಡುವಾಗ ನಾಯಿ ಬೊಗಳಿದರೆ ಆನೆಗೆ ಯಾವ ತೊಂದರೆಯೂ ಆಗುವುದಿಲ್ಲ ಎಂಬುದನ್ನು ದೊರೆಸ್ವಾಮಿ ಬಗ್ಗೆ ಮಾತನಾಡುವವರು ಗಮನಿಸಬೇಕು’ ಎಂದು ಹೇಳಿದ್ದಾರೆ.</p>.<p><strong>ಯತ್ನಾಳ ಉಚ್ಚಾಟನೆಗೆ ಆಗ್ರಹ:</strong> ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸುವಂತೆ ರೈತ ಹಾಗೂ ದಲಿತ ಸಂಘಟನೆಗಳು ಒತ್ತಾಯಿಸಿವೆ. ಯತ್ನಾಳ ಹೇಳಿಕೆಯನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ದಲಿತ ಮುಖಂಡರಾದ ಲಕ್ಷ್ಮೀನಾರಾಯಣ ನಾಗವಾರ ಹಾಗೂ ಮಾವಳ್ಳಿ ಶಂಕರ್ ಖಂಡಿಸಿದ್ದಾರೆ.</p>.<p>********</p>.<p><strong>ಹೇಳಿಕೆಗೆ ಬದ್ಧ</strong></p>.<p>ವಿಜಯಪುರ: ‘ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಅವರು ಪಾಕ್, ಕಾಂಗ್ರೆಸ್ ಮತ್ತು ಜೆಡಿಎಸ್ ಏಜೆಂಟ್ ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದೊರೆಸ್ವಾಮಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖವಾಣಿ. ದೇಶದ್ರೋಹಿ ಘೋಷಣೆ ಕೂಗಿದ ಅಮೂಲ್ಯಾ ವಿರುದ್ಧ ಅವರೇಕೆಮಾತನಾಡಲಿಲ್ಲ. ಕಾಂಗ್ರೆಸ್<br />ನವರು ನನ್ನ ವಿರುದ್ಧ ಹೋರಾಡುವ ಬದಲು ದೇಶ ವಿರೋಧಿ ಚಟುವಟಿಕೆ ಮಾಡುವವರ ವಿರುದ್ಧ ಹೋರಾಡಲಿ. ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವುದಿಲ್ಲ’ ಎಂದು ಗುಡುಗಿದರು.</p>.<p>‘ದೇಶದ್ರೋಹಿ ಹೇಳಿಕೆ ನೀಡಿದರೆ ಗುಂಡೇಟು ಬೀಳುತ್ತವೆ ಎಂದು ಹೇಳಿದ್ದೆ. ಡೊನಾಲ್ಡ್ ಟ್ರಂಪ್ ಭಾರತ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸುಮ್ಮನಿದ್ದರು. ಈಗ ಟ್ರಂಪ್ ವಾಪಸುಹೋಗಿದ್ದು, ದೆಹಲಿಯಲ್ಲಿ ಕಾರ್ಯಾಚರಣೆ ಆರಂಭವಾಗಿದೆ’ ಎಂದರು.</p>.<p>‘ದೇಶದ್ರೋಹಿಗಳು ನೇರವಾಗಿ ಜನ್ನತ್ಗೆ ಹೋಗಬೇಕಿದೆ. ಜನ್ನತ್ನಲ್ಲಿರುವ 72 ಕನ್ಯೆಯರು ಭಾರತದಲ್ಲಿರುವ ಪಾಕಿಸ್ತಾನದ ಏಜೆಂಟರ ಸೇವೆಗೆ ಕಾಯುತ್ತಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ<br />ಪೊಲೀಸರು ಕಠಿಣ ನಿರ್ಣಯ ಕೈಗೊಳ್ಳದಿದ್ದರೆ ದೆಹಲಿ ಮಾದರಿಯಲ್ಲಿ ಹಿಂಸಾಚಾರವಾಗುತ್ತಿತ್ತು. ದೇಶದಲ್ಲಿ ಇಂತಹದ್ದೊಂದು ಕ್ರಾಂತಿ ಆಗಬೇಕಿತ್ತು. ಇಲ್ಲದಿದ್ದರೆ ದೇಶವೂ ಉಳಿಯುವುದಿಲ್ಲ, ಹಿಂದೂಗಳೂ ಉಳಿಯುವುದಿಲ್ಲ’ ಎಂದರು.</p>.<p>***</p>.<p>ಫೆ.27ರಂದು ಗಾಂಧಿಭವನದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಯತ್ನಾಳಅವರನ್ನು ಪಕ್ಷದಿಂದ ಉಚ್ಚಾಟಿಸುವವರೆಗೂ ಹೋರಾಟ ನಡೆಸಲಿದ್ದೇವೆ -<strong>ಬಿ.ಆರ್.ಪಾಟೀಲ, ಮಾಜಿ ಶಾಸಕ</strong></p>.<p>ಪಾಕ್ ಪರ ಘೋಷಣೆ ಕೂಗಿದವರನ್ನು ಜೈಲಿಗೆ ಹಾಕುತ್ತಾರೆ. ದೊರೆಸ್ವಾಮಿ ಅವರನ್ನೇ ‘ಪಾಕ್ ಏಜೆಂಟ್’ ಎಂದರೂ ಸರ್ಕಾರ ಏಕೆ ಸುಮ್ಮನಿದೆ?<strong>-ಬಿ.ಟಿ.ಲಲಿತಾನಾಯಕ್, ಲೇಖಕಿ</strong></p>.<p>ಯತ್ನಾಳರಂತಹ ಅವಿವೇಕಿಗಳನ್ನು ಸರ್ಕಾರವೇ ಪೋಷಿಸುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ಬಗ್ಗೆ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು<br /><strong>ಕೋಡಿಹಳ್ಳಿ ಚಂದ್ರಶೇಖರ್, ರೈತ ಮುಖಂಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಚ್.ಎಸ್.ದೊರೆಸ್ವಾಮಿ ಅವರನ್ನು ‘ನಕಲಿ ಸ್ವಾತಂತ್ರ್ಯ ಹೋರಾಟಗಾರ’ ಎಂದು ಟೀಕಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ವಿಧಾನ ಮಂಡಲದ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡರು ಎಚ್ಚರಿಸಿದರು.</p>.<p>ವಿಧಾನಸೌಧ ಆವರಣದಲ್ಲಿ ಇರುವ ಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು, ಯತ್ನಾಳ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವವರೆಗೂಹೋರಾಟ ಮುಂದುವರಿಸಲು ನಿರ್ಧರಿಸಿದರು.</p>.<p>‘ದೊರೆಸ್ವಾಮಿ ಅವರ ಪಾದ ಮುಟ್ಟಿ ಯತ್ನಾಳ ಕ್ಷಮೆ ಕೇಳಬೇಕು. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು. ಶಾಸಕ ಸ್ಥಾನ ರದ್ದುಪಡಿಸಲು ಕ್ರಮಕೈಗೊಂಡು, ಪಕ್ಷದಿಂದ ಉಚ್ಚಾಟಿಸಬೇಕು. ಕ್ರಮ ಜರುಗಿಸದಿದ್ದರೆ ವಿಧಾನಸಭೆ ಅಧಿವೇಶನಕ್ಕೂ ಬರಲು ಅವಕಾಶ ನೀಡುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ಯತ್ನಾಳ ಹೇಳಿಕೆ ಹಿಂದೆ ಸಂಘ ಪರಿವಾರ, ಬಿಜೆಪಿಯವರ ಚಿತಾವಣೆ ಇದೆ. ದೊರೆಸ್ವಾಮಿ ಅವರನ್ನು ಟೀಕಿಸುವ ಮೂಲಕ ಇಡೀ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಕ್ರಮ ಜರುಗಿಸುವವರೆಗೂ ಹೋರಾಟ ನಿಲ್ಲದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>ಶಾಸಕರಾದ ಜಿ.ಪರಮೇಶ್ವರ, ಎಚ್.ಕೆ.ಪಾಟೀಲ, ಕೆ.ಆರ್. ರಮೇಶ್ ಕುಮಾರ್, ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ, ಸಿಪಿಎಂ ಮುಖಂಡ ಜಿ.ಎನ್.ನಾಗರಾಜ್ ಸಹ ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದರು.</p>.<p><strong>‘ದೊರೆಸ್ವಾಮಿ ನಾಲಿಗೆ ಹಿಡಿತದಲ್ಲಿಟ್ಟುಕೊಳ್ಳಲಿ’( ಕೊಪ್ಪಳ ವರದಿ):</strong> ‘ಶಾಸಕಬಸನಗೌಡ ಪಾಟೀಲ ಯತ್ನಾಳ ಆಡಿರುವ ಮಾತಿಗೆ ಎಚ್.ಎಸ್.ದೊರೆಸ್ವಾಮಿ ಅವರೇ ಕಾರಣ. ಶತಾಯುಷಿಯಾಗಿರುವ ದೊರೆಸ್ವಾಮಿತಮ್ಮ ನಾಲಿಗೆಯನ್ನು ಹಿಡಿತದಲ್ಲಿಟ್ಟಕೊಳ್ಳಬೇಕು’ ಎಂದು ವಸತಿ ಸಚಿವ ವಿ.ಸೋಮಣ್ಣ ಹರಿಹಾಯ್ದರು.</p>.<p>‘ಹಿರಿಯರಾದವರು ಅಳೆದು ತೂಗಿ ಮಾತನಾಡಿದರೆ ಯಾವುದೇ ತರಹದ ವಿರೋಧ ಇರಲ್ಲ. ಅವರು ಮಾರ್ಗದರ್ಶನ ಮಾಡಿ, ನಮ್ಮನ್ನು ತಿದ್ದಬೇಕು’ ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.</p>.<p><strong>ಯತ್ನಾಳ ಆರೋಪಕ್ಕೆ ಸಾಣೇಹಳ್ಳಿ ಶ್ರೀ ಅಸಮಾಧಾನ(ಚಿತ್ರದುರ್ಗ ವರದಿ)</strong>: ಶಾಸಕ ಯತ್ನಾಳ ಮಾಡಿದ ಆರೋಪಕ್ಕೆ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ಕುರಿತು ಸ್ವಾಮೀಜಿ ಆಡಿದ ಮಾತುಗಳ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ<br />ಹರಿದಾಡುತ್ತಿದೆ. ‘ದೊರೆಸ್ವಾಮಿ ಅವರಂತಹ ಹಿರಿಯ ಜೀವಿಗಳು ಆನೆ ಇದ್ದಂತೆ. ಆನೆ ನಡೆದಾಡುವಾಗ ನಾಯಿ ಬೊಗಳಿದರೆ ಆನೆಗೆ ಯಾವ ತೊಂದರೆಯೂ ಆಗುವುದಿಲ್ಲ ಎಂಬುದನ್ನು ದೊರೆಸ್ವಾಮಿ ಬಗ್ಗೆ ಮಾತನಾಡುವವರು ಗಮನಿಸಬೇಕು’ ಎಂದು ಹೇಳಿದ್ದಾರೆ.</p>.<p><strong>ಯತ್ನಾಳ ಉಚ್ಚಾಟನೆಗೆ ಆಗ್ರಹ:</strong> ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸುವಂತೆ ರೈತ ಹಾಗೂ ದಲಿತ ಸಂಘಟನೆಗಳು ಒತ್ತಾಯಿಸಿವೆ. ಯತ್ನಾಳ ಹೇಳಿಕೆಯನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ದಲಿತ ಮುಖಂಡರಾದ ಲಕ್ಷ್ಮೀನಾರಾಯಣ ನಾಗವಾರ ಹಾಗೂ ಮಾವಳ್ಳಿ ಶಂಕರ್ ಖಂಡಿಸಿದ್ದಾರೆ.</p>.<p>********</p>.<p><strong>ಹೇಳಿಕೆಗೆ ಬದ್ಧ</strong></p>.<p>ವಿಜಯಪುರ: ‘ದೊರೆಸ್ವಾಮಿ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಅವರು ಪಾಕ್, ಕಾಂಗ್ರೆಸ್ ಮತ್ತು ಜೆಡಿಎಸ್ ಏಜೆಂಟ್ ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.</p>.<p>ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ದೊರೆಸ್ವಾಮಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖವಾಣಿ. ದೇಶದ್ರೋಹಿ ಘೋಷಣೆ ಕೂಗಿದ ಅಮೂಲ್ಯಾ ವಿರುದ್ಧ ಅವರೇಕೆಮಾತನಾಡಲಿಲ್ಲ. ಕಾಂಗ್ರೆಸ್<br />ನವರು ನನ್ನ ವಿರುದ್ಧ ಹೋರಾಡುವ ಬದಲು ದೇಶ ವಿರೋಧಿ ಚಟುವಟಿಕೆ ಮಾಡುವವರ ವಿರುದ್ಧ ಹೋರಾಡಲಿ. ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವುದಿಲ್ಲ’ ಎಂದು ಗುಡುಗಿದರು.</p>.<p>‘ದೇಶದ್ರೋಹಿ ಹೇಳಿಕೆ ನೀಡಿದರೆ ಗುಂಡೇಟು ಬೀಳುತ್ತವೆ ಎಂದು ಹೇಳಿದ್ದೆ. ಡೊನಾಲ್ಡ್ ಟ್ರಂಪ್ ಭಾರತ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸುಮ್ಮನಿದ್ದರು. ಈಗ ಟ್ರಂಪ್ ವಾಪಸುಹೋಗಿದ್ದು, ದೆಹಲಿಯಲ್ಲಿ ಕಾರ್ಯಾಚರಣೆ ಆರಂಭವಾಗಿದೆ’ ಎಂದರು.</p>.<p>‘ದೇಶದ್ರೋಹಿಗಳು ನೇರವಾಗಿ ಜನ್ನತ್ಗೆ ಹೋಗಬೇಕಿದೆ. ಜನ್ನತ್ನಲ್ಲಿರುವ 72 ಕನ್ಯೆಯರು ಭಾರತದಲ್ಲಿರುವ ಪಾಕಿಸ್ತಾನದ ಏಜೆಂಟರ ಸೇವೆಗೆ ಕಾಯುತ್ತಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ<br />ಪೊಲೀಸರು ಕಠಿಣ ನಿರ್ಣಯ ಕೈಗೊಳ್ಳದಿದ್ದರೆ ದೆಹಲಿ ಮಾದರಿಯಲ್ಲಿ ಹಿಂಸಾಚಾರವಾಗುತ್ತಿತ್ತು. ದೇಶದಲ್ಲಿ ಇಂತಹದ್ದೊಂದು ಕ್ರಾಂತಿ ಆಗಬೇಕಿತ್ತು. ಇಲ್ಲದಿದ್ದರೆ ದೇಶವೂ ಉಳಿಯುವುದಿಲ್ಲ, ಹಿಂದೂಗಳೂ ಉಳಿಯುವುದಿಲ್ಲ’ ಎಂದರು.</p>.<p>***</p>.<p>ಫೆ.27ರಂದು ಗಾಂಧಿಭವನದಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಯತ್ನಾಳಅವರನ್ನು ಪಕ್ಷದಿಂದ ಉಚ್ಚಾಟಿಸುವವರೆಗೂ ಹೋರಾಟ ನಡೆಸಲಿದ್ದೇವೆ -<strong>ಬಿ.ಆರ್.ಪಾಟೀಲ, ಮಾಜಿ ಶಾಸಕ</strong></p>.<p>ಪಾಕ್ ಪರ ಘೋಷಣೆ ಕೂಗಿದವರನ್ನು ಜೈಲಿಗೆ ಹಾಕುತ್ತಾರೆ. ದೊರೆಸ್ವಾಮಿ ಅವರನ್ನೇ ‘ಪಾಕ್ ಏಜೆಂಟ್’ ಎಂದರೂ ಸರ್ಕಾರ ಏಕೆ ಸುಮ್ಮನಿದೆ?<strong>-ಬಿ.ಟಿ.ಲಲಿತಾನಾಯಕ್, ಲೇಖಕಿ</strong></p>.<p>ಯತ್ನಾಳರಂತಹ ಅವಿವೇಕಿಗಳನ್ನು ಸರ್ಕಾರವೇ ಪೋಷಿಸುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಈ ಬಗ್ಗೆ ಯಡಿಯೂರಪ್ಪ ಸ್ಪಷ್ಟನೆ ನೀಡಬೇಕು<br /><strong>ಕೋಡಿಹಳ್ಳಿ ಚಂದ್ರಶೇಖರ್, ರೈತ ಮುಖಂಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>