ಬೆಂಗಳೂರು: ಕೆಪಿಸಿಸಿ ಕಚೇರಿ ಎದುರು ನಡೆದ ಪ್ರತಿಭಟನೆ ನೇತೃತ್ವ ವಹಿಸಿದ್ದ ಮೂವರು ಮುಖಂಡರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಆರ್.ಮಂಜುನಾಥ್, ಮಾಜಿ ಕಾರ್ಯದರ್ಶಿಗಳಾದ ಎ.ಕೆಂಚೇಗೌಡ, ಎಂ.ಜಿ.ಬಲರಾಮ್ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಮಾನತು ಮಾಡಿದ್ದಾರೆ.
ಜ.20ರಂದು ಕಚೇರಿ ಎದುರು ಪಕ್ಷದ ನಾಯಕರು ಹಾಗೂ ನಾಯಕತ್ವದ ವಿರುದ್ಧ ಕೆಲವರು ಘೋಷಣೆ ಕೂಗಿ, ಭಿತ್ತಿಪತ್ರ ಪ್ರದರ್ಶಿಸಿದ್ದರು. ಇದನ್ನು ಎಐಸಿಸಿ ಗಂಭೀರವಾಗಿ ತೆಗೆದುಕೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಎಂದೇ ಪರಿಗಣಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.