ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, 'ಸಭಾಧ್ಯಕ್ಷರು ಸ್ವತಂತ್ರವಾಗಿ ಕೆಲಸಮಾಡುತ್ತಿದ್ದಾರಾ ಅಥವಾ ಪಕ್ಷಪಾತಿ ಆಗಿದ್ದಾರಾ ಎನ್ನುವ ಅನುಮಾನ ಬರುತ್ತದೆ‘ ಎಂದೂ ಹೇಳಿದರು. 'ಮಾರ್ಚ್ 27, 28ರವರೆಗೆ ಸದನ ನಡೆಸಬೇಕು. ಬಜೆಟ್ ಮೇಲೆ ಚರ್ಚೆ, ಮಸೂದೆಗಳನ್ನು ಅನುಮೋದಿಸುವುದು ಸರ್ಕಾರದ ಇರಾದೆ ಆಗಿತ್ತು. ಆದರೆ, ಬಜೆಟ್ ಮೇಲೆ ಚರ್ಚೆ ಅಪೂರ್ಣ
ವಾಗಿದೆ. ಜೂನ್ ಅಥವಾ ಜುಲೈನಲ್ಲಿ ಚರ್ಚಿಸೋಣ, ಜನರ ತೆರಿಗೆ ಹಣ ಸದ್ಬಳಕೆ ಆಗುತ್ತಿದೆಯೊ ಇಲ್ಲವೊ ಎಂಬ ಬಗ್ಗೆ ಚರ್ಚೆಯಾಗಬೇಕು ಎಂದೆವು. ಆದರೆ, ಇದಕ್ಕೆ ಒಪ್ಪದ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ಗೆ ಅನುಮೋದನೆ ಪಡೆದಿದೆ‘ ಎಂದು ದೂರಿದರು.