ಕೆಲ ತಿಂಗಳ ಹಿಂದೆ ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಪಕ್ಷದ ಅನೌಪಚಾರಿಕ ಶಾಸಕಾಂಗ ಸಭೆ ನಡೆದಿತ್ತು. ಈ ವೇಳೆ ಶಾಸಕ ಆನಂದ್ ಸಿಂಗ್ ಮತ್ತು ಗಣೇಶ್ ನಡುವೆ ಹೊಡೆದಾಟ ಸಂಭವಿಸಿತ್ತು. ಈ ಘಟನೆ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಹಿನ್ನೆಲೆಯಲ್ಲಿ ಗಣೇಶ್ ಅವರನ್ನು ಪಕ್ಷ ಅಮಾನತು ಮಾಡಿತ್ತು. ಅಲ್ಲದೆ, ಆಂತರಿಕ ವಿಚಾರಣೆಯನ್ನೂ ನಡೆಸಿತ್ತು. ನಂತರದಲ್ಲಿ ಗಣೇಶ್ ಬಂಧನ, ಸೆರೆವಾಸ, ಬಿಡುಗಡೆಯಂಥ ಬೆಳವಣಿಗೆಗಳೂ ನಡೆದಿವೆ.