ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗಂಗಾನಗರದ ಸಿಬಿಐ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ಮಾಡಿದರು.
ಪ್ರಧಾನಿ ಮೋದಿ ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಬೃಹತ್ ಹಗರಣ ನಡೆದಿದೆ. ಈ ಸಂಬಂಧ ತನಿಖೆ ಮಾಡಲು ಹೊರಟಿದ್ದಕ್ಕೆ ಅಲೋಕ್ ಅವರನ್ನು ರಾತ್ರೋರಾತ್ರಿ ಕೆಲಸದಿಂದ ತೆಗೆದುಹಾಕಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿದರು.
ಮೋದಿ ಒಬ್ಬ ಭ್ರಷ್ಟ ಪ್ರಧಾನಿ, ಅವರಿಗೆ ತೋಚಿದಂತೆ ಅಧಿಕಾರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಬಿಐ ನಿರ್ದೇಶಕರನ್ನು ಮರು ನಿಯುಕ್ತಿಗೊಳಿಸಬೇಕು ಎಂದು ಒತ್ತಾಯ.