ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನಂದ್‌ ಸಿಂಗ್‌ ಮನೆ ಎದುರು ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Last Updated 3 ಜುಲೈ 2019, 10:45 IST
ಅಕ್ಷರ ಗಾತ್ರ

ಹೊಸಪೇಟೆ: ರಾಜೀನಾಮೆ ಹಿಂಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದ ರಾಣಿಪೇಟೆಯಲ್ಲಿನ ಶಾಸಕ ಆನಂದ್ ಸಿಂಗ್ ಅವರ ಮನೆ‌ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಮುಖಂಡರಾದ ಬಿ.ವಿ.ಶಿವಯೋಗಿ, ಜೆ.ಎಸ್‌. ಆಂಜನೇಯ, ವೆಂಕಟೇಶ ರೆಡ್ಡಿ, ಅಬ್ದುಲ್‌ ವಹಾಬ್‌ ನೇತ್ವತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ‘ಹಿಂಪಡೆಯಿರಿ, ಹಿಂಪಡೆಯಿರಿ ರಾಜೀನಾಮೆ ಹಿಂಪಡೆಯಿರಿ’ ಎಂದು ಘೋಷಣೆಗಳನ್ನು ಕೂಗಿದರು.

ಈ ವೇಳೆ ಮನೆಯಿಂದ ಹೊರಬಂದ ಸಿಂಗ್‌, ’ಈ ಕುರಿತು ನಾನು ಪಕ್ಷದ ಮುಖಂಡರೊಂದಿಗೆ ಮಾತನಾಡುವೆ. ದಯವಿಟ್ಟು ನೀವು ಹೋಗಿ’ ಎಂದು ಹೇಳಿ ಪುನಃ ಮನೆಯೊಳಗೆ ಹೋದರು. ಇದರಿಂದ ಸಮಾಧಾನರಾಗದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ಮುಂದುವರೆಸಿದರು.

‘ಆನಂದ್‌ ಸಿಂಗ್‌ ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಕೂಡಲೇ ಅವರು ಅದನ್ನು ವಾಪಸ್‌ ಪಡೆಯಬೇಕು. ಏನೇ ಭಿನ್ನಾಭಿಪ್ರಾಯವಿದ್ದರೂ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಪಕ್ಷದಲ್ಲೇ ಮುಂದುವರಿಯಬೇಕು. ಅವರು ರಾಜೀನಾಮೆ ಹಿಂಪಡೆಯದಿದ್ದಲ್ಲಿ ಇಡೀ ಜಿಲ್ಲೆಯ ಕಾರ್ಯಕರ್ತರು ಅವರು ಮನೆ ಎದುರು ಪ್ರತಿಭಟನೆ ನಡೆಸುವರು’ ಎಂದು ಮುಖಂಡ ಬಿ.ವಿ. ಶಿವಯೋಗಿ ತಿಳಿಸಿದರು.

‘ಬಿಜೆಪಿಯ ಆಪರೇಷನ್‌ ಕಮಲದ ಆಸೆ ಈಡೇರುವುದಿಲ್ಲ. ಆನಂದ್‌ ಸಿಂಗ್‌ ಸೇರಿದಂತೆ ಯಾವ ಶಾಸಕರು ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ. ಸಿಂಗ್‌ ಬಿಜೆಪಿಗೆ ಹೋಗುವುದಿಲ್ಲ ಎಂಬ ಭರವಸೆ ಇದೆ’ ಎಂದು ಹೇಳಿದರು.

ಮುಖಂಡರಾದ ರಫೀಕ್ ಟಿಂಕರ್, ಸಿ.ಆರ್.ಹನುಮಂತ, ನಿಂಬಗಲ್ ರಾಮಕೃಷ್ಣ, ಫಹೀಮ್ ಬಾಷಾ, ಮಂಜುನಾಥ, ಹಬೀಬ್ ರೆಹಮಾನ್, ವಿಷ್ಣು ಬೋಯಿಪಾಟಿ, ಧನಲಕ್ಷ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT