ಪುಣೆಯ ನ್ಯಾಷನಲ್ ಇನಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಚೆನ್ನೈನ ನ್ಯಾಷನಲ್ ಇನಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ತಜ್ಞರ ಸಹಭಾಗಿತ್ವದಲ್ಲಿ ಭಾರತೀಯ ವೈದ್ಯಕೀಯ ವಿಜ್ಞಾನ ಸಂಶೋಧನಾ ಕೌನ್ಸಿಲ್ ಮೂಲಕ ಸಂಶೋಧನೆ ನಡೆಸುವಂತೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಬೇಕು. ರೋಗ ಪರೀಕ್ಷೆಗೆ ಬೇಕಾಗುವ ರಕ್ತ ಮತ್ತು ಮತ್ತಿತರ ನಮೂನೆಗಳು, ಸಾಕ್ಷ್ಯಗಳು ಹಾಗೂ ಸುಳಿವುಗಳು ಹೇರಳವಾಗಿ ಲಭಿಸುವುದರಿಂದ ಸಂಶೋಧನೆಗೆ ಅನುಕೂಲವಾಗುತ್ತದೆ. ಶಿವಮೊಗ್ಗದಲ್ಲಿರುವ ಪ್ರಯೋಗಾಲಯವನ್ನು ಸುಸಜ್ಜಿತಗೊಳಿಸಬೇಕು ಎಂದು ಪಶ್ಚಿಮಘಟ್ಟ ಉಳಿಸಿ ಆಂದೋಲನದ ಸಂಚಾಲಕ ಬಿ.ಎಂ.ಕುಮಾರಸ್ವಾಮಿ, ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ಟಿ.ವಿ.ರಾಮಚಂದ್ರ, ಪರಿಸರ ತಜ್ಞ ನಾಗೇಶ ಹೆಗಡೆ, ಔಷಧ ಸಸ್ಯ ಪ್ರಾಧಿಕಾರದ ಸದಸ್ಯ ಕೇಶವ ಕೊರ್ಸೆ, ಪರಿಸರವಾದಿ ವಾಮನ ಆಚಾರ್ಯ ಒತ್ತಾಯಿಸಿದ್ದಾರೆ. ಪ್ರಮುಖರಾದ ವಿಶ್ವನಾಥ ಬುಗಡಿಮನೆ, ನರಸಿಂಹ ವಾನಳ್ಳಿ, ಆರ್.ಪಿ.ಹೆಗಡೆ, ಗಣಪತಿ ಕೆ ಇದ್ದರು.