‘ಪುಣೆ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಬಂಧಿಸಿರುವ ಚಿಂತಕರು, ಪ್ರಗತಿಪರರು 30 ವರ್ಷಗಳಿಂದ ದಮನಿತರ ಹಕ್ಕುಗಳಿಗೆ ಹೋರಾಟ ನಡೆಸುತ್ತಿದ್ದಾರೆ. ಅವರು ಕೇಂದ್ರ ಸರ್ಕಾರದ ಕೆಲವು ನೀತಿಗಳನ್ನು ವಿರೋಧಿಸಿದ್ದಾರೆ ಎಂಬ ಏಕೈಕ ಕಾರಣಕ್ಕೆ ಅವರ ಮೇಲೆ ಗುರುತರ ಆರೋಪ ಹೊರಿಸಿ, ಅವರ ದನಿ ಅಡಗಿಸುವ ಕೆಲಸ ಕೇಂದ್ರ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಅಪಾಯಕಾರಿ ಬೆಳವಣಿಗೆ’ ಎಂದು ಹೇಳಿದರು.