ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸಂವಿಧಾನ ಏಕತಾ ಸಮಿತಿ ಪದಾಧಿಕಾರಿಗಳು, ಸ್ವಾಮೀಜಿಗಳ ಜತೆ ಸಭೆ ನಡೆಸಿದರು. ಈ ವೇಳೆ ಏಕತಾ ಸಮಿತಿ ಪದಾಧಿಕಾರಿಗಳು ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಶಾಲಾ–ಕಾಲೇಜುಗಳಲ್ಲಿ ವಾರಕ್ಕೊಮ್ಮೆ ಸಂವಿಧಾನದ ಬಗ್ಗೆ ತಜ್ಞರಿಂದ ಪಾಠ ಮಾಡಿಸುವುದು ಸೂಕ್ತ ಎಂದು ಸಮಿತಿ ಸಲಹೆ ನೀಡಿತು. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸಿ.ಎಂ ಭರವಸೆ ನೀಡಿದರು.