ಬೆಂಗಳೂರು: ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯ ನಿರ್ವಹಿಸುವ ಮಹಿಳಾ ಕಾನ್ಸ್ಟೇಬಲ್ವೊಬ್ಬರ ಪತಿಗೆ ಕೊರೊನಾ ಪಾಸಿಟವ್ ಆಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಎಲ್ಲ ಅಧಿಕೃತ ಸಭೆಗಳನ್ನು ವಿಧಾನಸೌಧಕ್ಕೆ ಸ್ಥಳಾಂತರಿಸಿದರು.
ಎರಡು ದಿನಗಳ ಹಿಂದೆ ಕಾರವಾನ್ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಈ ಮಹಿಳಾ ಕಾನ್ಸ್ಟೇಬಲ್ ಭಾಗವಹಿಸಿದ್ದರು.
ಪತಿಯಲ್ಲಿ ಕೊರೊನಾ ಪಾಸಿಟವ್ ಕಂಡು ಬಂದ ಹಿನ್ನೆಲೆಯಲ್ಲಿ ಈಗ ಪತ್ನಿಯನ್ನೂ ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬರಬೇಕಾಗಿದೆ. ಇವರ ಜತೆ ಕಾರ್ಯ ನಿರ್ವಹಿಸಿದ ಎಲ್ಲ ಸಿಬ್ಬಂದಿಯನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.