<p id="thickbox_headline"><strong>ಬೆಂಗಳೂರು:</strong> ಕೋವಿಡ್–19ಕ್ಕೆತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ 60 ವರ್ಷದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಇದರಿಂದಾಗಿರಾಜ್ಯದಲ್ಲಿಸಾವಿನಸಂಖ್ಯೆ3ಕ್ಕೆಏರಿಕೆಯಾಗಿದೆ. ಶುಕ್ರವಾರ 9 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರಸಂಖ್ಯೆ64ಕ್ಕೆ ತಲುಪಿದೆ.</p>.<p>ಕಲಬುರ್ಗಿಯ ಮೊಹ್ಮದ್ ಹುಸೇನ್ ಸಿದ್ಧಿಕಿ ಕಳೆದ ಮಾ.10ರಂದು ಈ ಸೋಂಕಿನಿಂದ ಮೃತಪಟ್ಟಿದ್ದರು. ಮೆಕ್ಕಾದಿಂದ ಬೆಂಗಳೂರಿಗೆ ಬಂದಿದ್ದಚಿಕ್ಕಬಳ್ಳಾಪುರದ 70 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆಯೇ ಮಾ.24 ನಿಧನರಾಗಿದ್ದರು. ಈ ಇಬ್ಬರೂ ಕೊರೊನಾ ಸೋಂಕಿನಿಂದಲೇ ಸತ್ತಿದ್ದಾರೆ ಎನ್ನುವುದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೃಢಪಟ್ಟಿತ್ತು. ಶುಕ್ರವಾರ ಮೃತಪಟ್ಟ ಶಿರಾದ ನಿವಾಸಿಮಾ.13 ರಂದು ದೆಹಲಿಗೆ ರೈಲಿನಲ್ಲಿ ಹೋಗಿದ್ದರು.</p>.<p>ಇವರೊಂದಿಗೆ ನೇರ ಸಂಪರ್ಕ ಹೊಂದಿದ್ದ24 ಮಂದಿಯನ್ನು ಗುರುತಿಸಿ, ಪ್ರತ್ಯೇಕಿಸಲಾಗಿದೆ.ದಕ್ಷಿಣ ಕನ್ನಡದಲ್ಲಿ 10 ತಿಂಗಳ ಗಂಡು ಮಗುವಿಗೆ ಸೋಂಕು ತಗುಲಿದೆ. ಈ ಮಗು ಯಾವುದೇ ಕೋವಿಡ್–19 ಪ್ರಭಾವಿತ ದೇಶಕ್ಕೆ ಪ್ರಯಾಣಿಸಿದ ಹಿನ್ನೆಲೆ ಹೊಂದಿಲ್ಲ. ಆದರೆ, ಪೋಷಕರು ಮಗುವಿನೊಂದಿಗೆ ಕೆಲದಿನಗಳ ಹಿಂದೆ ಕೇರಳಕ್ಕೆ ಭೇಟಿ ನೀಡಿದ್ದರು. ಹೊಸದಾಗಿ ಬೆಂಗಳೂರಿನಲ್ಲಿ 4, ತುಮಕೂರು, ಉತ್ತರ ಕನ್ನಡ, ದಾವಣಗೆರೆಯಲ್ಲಿ ತಲಾ 1 ಹಾಗೂ ದಕ್ಷಿಣ ಕನ್ನಡದಲ್ಲಿಎರಡು ಪ್ರಕರಣಗಳು ವರದಿಯಾಗಿವೆ. 12 ಮಂದಿಯನ್ನು ಸೋಂಕು ಶಂಕೆ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p id="thickbox_headline"><strong>ಬೆಂಗಳೂರು:</strong> ಕೋವಿಡ್–19ಕ್ಕೆತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ 60 ವರ್ಷದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ. ಇದರಿಂದಾಗಿರಾಜ್ಯದಲ್ಲಿಸಾವಿನಸಂಖ್ಯೆ3ಕ್ಕೆಏರಿಕೆಯಾಗಿದೆ. ಶುಕ್ರವಾರ 9 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರಸಂಖ್ಯೆ64ಕ್ಕೆ ತಲುಪಿದೆ.</p>.<p>ಕಲಬುರ್ಗಿಯ ಮೊಹ್ಮದ್ ಹುಸೇನ್ ಸಿದ್ಧಿಕಿ ಕಳೆದ ಮಾ.10ರಂದು ಈ ಸೋಂಕಿನಿಂದ ಮೃತಪಟ್ಟಿದ್ದರು. ಮೆಕ್ಕಾದಿಂದ ಬೆಂಗಳೂರಿಗೆ ಬಂದಿದ್ದಚಿಕ್ಕಬಳ್ಳಾಪುರದ 70 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆಯೇ ಮಾ.24 ನಿಧನರಾಗಿದ್ದರು. ಈ ಇಬ್ಬರೂ ಕೊರೊನಾ ಸೋಂಕಿನಿಂದಲೇ ಸತ್ತಿದ್ದಾರೆ ಎನ್ನುವುದು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ದೃಢಪಟ್ಟಿತ್ತು. ಶುಕ್ರವಾರ ಮೃತಪಟ್ಟ ಶಿರಾದ ನಿವಾಸಿಮಾ.13 ರಂದು ದೆಹಲಿಗೆ ರೈಲಿನಲ್ಲಿ ಹೋಗಿದ್ದರು.</p>.<p>ಇವರೊಂದಿಗೆ ನೇರ ಸಂಪರ್ಕ ಹೊಂದಿದ್ದ24 ಮಂದಿಯನ್ನು ಗುರುತಿಸಿ, ಪ್ರತ್ಯೇಕಿಸಲಾಗಿದೆ.ದಕ್ಷಿಣ ಕನ್ನಡದಲ್ಲಿ 10 ತಿಂಗಳ ಗಂಡು ಮಗುವಿಗೆ ಸೋಂಕು ತಗುಲಿದೆ. ಈ ಮಗು ಯಾವುದೇ ಕೋವಿಡ್–19 ಪ್ರಭಾವಿತ ದೇಶಕ್ಕೆ ಪ್ರಯಾಣಿಸಿದ ಹಿನ್ನೆಲೆ ಹೊಂದಿಲ್ಲ. ಆದರೆ, ಪೋಷಕರು ಮಗುವಿನೊಂದಿಗೆ ಕೆಲದಿನಗಳ ಹಿಂದೆ ಕೇರಳಕ್ಕೆ ಭೇಟಿ ನೀಡಿದ್ದರು. ಹೊಸದಾಗಿ ಬೆಂಗಳೂರಿನಲ್ಲಿ 4, ತುಮಕೂರು, ಉತ್ತರ ಕನ್ನಡ, ದಾವಣಗೆರೆಯಲ್ಲಿ ತಲಾ 1 ಹಾಗೂ ದಕ್ಷಿಣ ಕನ್ನಡದಲ್ಲಿಎರಡು ಪ್ರಕರಣಗಳು ವರದಿಯಾಗಿವೆ. 12 ಮಂದಿಯನ್ನು ಸೋಂಕು ಶಂಕೆ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>