ಜಿಲ್ಲೆಯ ಬಾದಾಮಿ, ಬಾಗಲಕೋಟೆ, ಇಳಕಲ್, ಜಮಖಂಡಿ, ಮುಧೋಳ ಘಟಕಗಳಿಂದ ಪ್ರತಿನಿತ್ಯ ಮುಂಬೈ ಹಾಗೂ ಪುಣೆಗೆ ತೆರಳುವ ಐದು ಐಷಾರಾಮಿ ಬಸ್ ಗಳ ಸಂಚಾರವನ್ನು ಅನಿರ್ದಿಷ್ಟ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಪುನಃ ಬಸ್ ಸೇವೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.