ಈ ಕುರಿತು ಪ್ರಜಾವಾಣಿಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ, ‘ಇತ್ತೀಚೆಗೆ ಮೆಕ್ಕಾ ಯಾತ್ರೆ ಮುಗಿಸಿ ಮಾರ್ಚ್ 16 ರಾತ್ರಿ ಗೌರಿಬಿದನೂರಿಗೆ ವಾಪಾಸಾದ 65 ವಯಸ್ಸಿನ ಮಹಿಳೆ ಮತ್ತು ಅವರ 31 ವಯೋಮಾನದ ಮಗನಲ್ಲಿ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಇಬ್ಬರಿಗೂ ಬೆಂಗಳೂರಿನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ’ಎಂದು ಹೇಳಿದರು.