ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19 ವಿರುದ್ಧ ಡ್ರೋಣ್ ಮೂಲಕ ಹೋರಾಟ

ಸಾವಯವ ಔಷಧ ಸಿಂಪರಣೆ
Last Updated 27 ಜೂನ್ 2020, 13:46 IST
ಅಕ್ಷರ ಗಾತ್ರ

ಬೆಂಗಳೂರು: ಮಾರಕ ಕೋವಿಡ್ 19 ವಿರುದ್ಧ ಹೋರಾಟಕ್ಕೆ ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ನವೀನ ರೀತಿಯ ಹೋರಾಟ ಆರಂಭವಾಗಿದೆ.

ವ್ಯಾಪಕವಾಗಿ ಹರಡುತ್ತಿರುವ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಡ್ರೋಣ್ ಮೂಲಕ ಸಾವಯವ ಔಷಧವನ್ನು ಸಿಂಪರಣೆ ಮಾಡುವ ಕಾರ್ಯಕ್ಕೆ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಶನಿವಾರ ಚಾಲನೆ ನೀಡಿದರು.

ಭಾನುವಾರದಿಂದ ಪೂರ್ಣ ಪ್ರಮಾಣದಲ್ಲಿ ಇಡೀ ಕ್ಷೇತ್ರದಾದ್ಯಂತ ಈ ಔಷಧವನ್ನು ಡ್ರೋನ್‌ ಮೂಲಕ ಸಿಂಪಡಣೆ ಮಾಡಲಾಗುವುದು. ಇದರಿಂದ ಕೋವಿಡ್ ಹರಡುವುದನ್ನು ತಡೆಯಬಹುದು ಎಂದು ಡಿಸಿಎಂ ಹೇಳಿದರು.

ಟೀಮ್‌ ದಕ್ಷ ಮತ್ತು ಸುಗಾರ್ಧನ ಸಂಸ್ಥೆ ಜಂಟಿಯಾಗಿ ಡ್ರೋಣ್‌ಗಳನ್ನು ಒದಗಿಸಿದ್ದು, ಔಷಧ ಸಿಂಪಡಣೆಗೆ ನೆರವಾಗಿವೆ. ಇದನ್ನು ಡಿಸಿಎಂ ಅಶ್ವತ್ಥನಾರಾಯಣ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಾಳೆ ಇಡೀ ದಿನ ಮಲ್ಲೇಶ್ವರ ಕ್ಷೇತ್ರದ ಜನಸಂದಣಿ ಹೆಚ್ಚು ಇರುವ ಪ್ರದೇಶದಲ್ಲಿ ಸಿಂಪಡಣೆ ನಡೆಯಲಿದೆ.

ಇದು ಸೋಂಕಿನ ಕಾಯಿಲೆ ಆಗಿರುವುದರಿಂದ ಇದನ್ನು ತಡೆಯುವ ನಿಟ್ಟಿನಲ್ಲಿ ತಾಂತ್ರಿಕವಾಗಿ ಲಭ್ಯವಿರುವ ಎಲ್ಲ ಅವಕಾಶಗಳನ್ನು ಬಳಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಾವು ಮುಕ್ತವಾಗಿ ಪ್ರಯತ್ನಿಸಬೇಕು ಎಂದು ಅವರು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT