<p><strong>ಬೆಂಗಳೂರು:</strong> ಕೊರೊನಾ ಸೋಂಕಿನಿಂದಾಗಿ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.</p>.<p>ಉಡುಪಿಯಲ್ಲಿ 92 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 257 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 4,320ಕ್ಕೆ ತಲುಪಿದೆ.ಕೇವಲ 48 ಗಂಟೆಗಳಲ್ಲಿ 524 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಗುರುವಾರ ವರದಿಯಾದ ಪ್ರಕರಣಗಳಲ್ಲಿ 155 ಮಂದಿ ಅನ್ಯರಾಜ್ಯಗಳಿಂದ ಬಂದವರಾಗಿದ್ದಾರೆ.</p>.<p>ಒಬ್ಬರು ಅಂತರರಾಷ್ಟ್ರೀಯ ಪ್ರಯಾಣ ಮಾಡಿದ ಇತಿಹಾಸ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳಲ್ಲಿ 2,312 ಮಂದಿ ಮಹಾರಾಷ್ಟ್ರದ ನಂಟು ಹೊಂದಿದ್ದಾರೆ.</p>.<p>ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯದಲ್ಲಿ 15, ಹಾಸನದಲ್ಲಿ 15, ದಾವಣಗೆರೆಯಲ್ಲಿ 13, ಬೆಳಗಾವಿಯಲ್ಲಿ 12, ಬೆಂಗಳೂರಿನಲ್ಲಿ 9, ದಕ್ಷಿಣ ಕನ್ನಡದಲ್ಲಿ 4, ಚಿಕ್ಕಬಳ್ಳಾಪುರದಲ್ಲಿ 2, ಗದಗದಲ್ಲಿ 2 ಹಾಗೂ ವಿಜಯಪುರ, ಮೈಸೂರು, ಬಳ್ಳಾರಿ, ತುಮಕೂರು, ಹಾವೇರಿಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ. ಮಂಡ್ಯದಲ್ಲಿ 52 ಸೇರಿದಂತೆ 106 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.</p>.<p>ಗದಗದಲ್ಲಿ ಶೀತಜ್ವರ ಮಾದರಿಯ ಅನಾರೋಗ್ಯದಿಂದ (ಐಎಲ್ಐ) ಬಳಲುತ್ತಿದ್ದ 44 ವರ್ಷದ ವ್ಯಕ್ತಿ ಜೂ.2ರಂದು ಮೃತಪಟ್ಟಿದ್ದರು.</p>.<p>ದಾವಣಗೆರೆಯಲ್ಲಿ 83 ವರ್ಷದ ವೃದ್ಧೆ, ಎದೆ ನೋವಿನಿಂದಾಗಿ ಮೇ 31ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಮೂತ್ರಪಿಂಡ ವೈಫಲ್ಯದಿಂದ ಮರಣ ಹೊಂದಿದ್ದಾರೆ. ತೀವ್ರಉಸಿರಾಟದ ಸಮಸ್ಯೆ ಹೊಂದಿದ್ದ ಬೆಂಗಳೂರಿನ 65 ವರ್ಷದಮಹಿಳೆ ಜೂ.3ರಂದು ನಿಗದಿತ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದರು.</p>.<p>ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಬೆಂಗಳೂರಿನ 60 ವರ್ಷದ ಮಹಿಳೆ ಕೂಡ ಜೂ.3ರಂದು ಆಸ್ಪತ್ರೆಗೆ ದಾಖಲಾಗಿ, ಮರಣ ಹೊಂದಿದ್ದರು. ಕೋವಿಡ್ ಪರೀಕ್ಷೆ ವರದಿಯಿಂದ ಮೃತರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಬೆಂಗಳೂರಿನಲ್ಲಿ 67 ವರ್ಷದವೃದ್ಧರೊಬ್ಬರು ಮೃತಪಟ್ಟಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ಬುಧವಾರ ಖಚಿತಪಡಿಸಿದ್ದರು. ಆದರೆ, ಆರೋಗ್ಯ ಇಲಾಖೆ ಬುಲೆಟಿನ್ನಲ್ಲಿ ಈ ಮಾಹಿತಿ ಸೇರಿಲ್ಲ.ದಾವಣಗೆರೆಯಲ್ಲಿ ಖಾಸಗಿ ಆಸ್ಪತ್ರೆಯ 37 ಹಾಗೂ 35 ವರ್ಷದ ವೈದ್ಯರಿಗೆ ಸೋಂಕು ತಗುಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕಿನಿಂದಾಗಿ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿರುವುದು ಗುರುವಾರ ದೃಢಪಟ್ಟಿದೆ. ಇದರಿಂದಾಗಿ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.</p>.<p>ಉಡುಪಿಯಲ್ಲಿ 92 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ 257 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 4,320ಕ್ಕೆ ತಲುಪಿದೆ.ಕೇವಲ 48 ಗಂಟೆಗಳಲ್ಲಿ 524 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಗುರುವಾರ ವರದಿಯಾದ ಪ್ರಕರಣಗಳಲ್ಲಿ 155 ಮಂದಿ ಅನ್ಯರಾಜ್ಯಗಳಿಂದ ಬಂದವರಾಗಿದ್ದಾರೆ.</p>.<p>ಒಬ್ಬರು ಅಂತರರಾಷ್ಟ್ರೀಯ ಪ್ರಯಾಣ ಮಾಡಿದ ಇತಿಹಾಸ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳಲ್ಲಿ 2,312 ಮಂದಿ ಮಹಾರಾಷ್ಟ್ರದ ನಂಟು ಹೊಂದಿದ್ದಾರೆ.</p>.<p>ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯದಲ್ಲಿ 15, ಹಾಸನದಲ್ಲಿ 15, ದಾವಣಗೆರೆಯಲ್ಲಿ 13, ಬೆಳಗಾವಿಯಲ್ಲಿ 12, ಬೆಂಗಳೂರಿನಲ್ಲಿ 9, ದಕ್ಷಿಣ ಕನ್ನಡದಲ್ಲಿ 4, ಚಿಕ್ಕಬಳ್ಳಾಪುರದಲ್ಲಿ 2, ಗದಗದಲ್ಲಿ 2 ಹಾಗೂ ವಿಜಯಪುರ, ಮೈಸೂರು, ಬಳ್ಳಾರಿ, ತುಮಕೂರು, ಹಾವೇರಿಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ. ಮಂಡ್ಯದಲ್ಲಿ 52 ಸೇರಿದಂತೆ 106 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.</p>.<p>ಗದಗದಲ್ಲಿ ಶೀತಜ್ವರ ಮಾದರಿಯ ಅನಾರೋಗ್ಯದಿಂದ (ಐಎಲ್ಐ) ಬಳಲುತ್ತಿದ್ದ 44 ವರ್ಷದ ವ್ಯಕ್ತಿ ಜೂ.2ರಂದು ಮೃತಪಟ್ಟಿದ್ದರು.</p>.<p>ದಾವಣಗೆರೆಯಲ್ಲಿ 83 ವರ್ಷದ ವೃದ್ಧೆ, ಎದೆ ನೋವಿನಿಂದಾಗಿ ಮೇ 31ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ಮೂತ್ರಪಿಂಡ ವೈಫಲ್ಯದಿಂದ ಮರಣ ಹೊಂದಿದ್ದಾರೆ. ತೀವ್ರಉಸಿರಾಟದ ಸಮಸ್ಯೆ ಹೊಂದಿದ್ದ ಬೆಂಗಳೂರಿನ 65 ವರ್ಷದಮಹಿಳೆ ಜೂ.3ರಂದು ನಿಗದಿತ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟಿದ್ದರು.</p>.<p>ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದ ಬೆಂಗಳೂರಿನ 60 ವರ್ಷದ ಮಹಿಳೆ ಕೂಡ ಜೂ.3ರಂದು ಆಸ್ಪತ್ರೆಗೆ ದಾಖಲಾಗಿ, ಮರಣ ಹೊಂದಿದ್ದರು. ಕೋವಿಡ್ ಪರೀಕ್ಷೆ ವರದಿಯಿಂದ ಮೃತರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಬೆಂಗಳೂರಿನಲ್ಲಿ 67 ವರ್ಷದವೃದ್ಧರೊಬ್ಬರು ಮೃತಪಟ್ಟಿರುವುದಾಗಿ ಬಿಬಿಎಂಪಿ ಅಧಿಕಾರಿಗಳು ಬುಧವಾರ ಖಚಿತಪಡಿಸಿದ್ದರು. ಆದರೆ, ಆರೋಗ್ಯ ಇಲಾಖೆ ಬುಲೆಟಿನ್ನಲ್ಲಿ ಈ ಮಾಹಿತಿ ಸೇರಿಲ್ಲ.ದಾವಣಗೆರೆಯಲ್ಲಿ ಖಾಸಗಿ ಆಸ್ಪತ್ರೆಯ 37 ಹಾಗೂ 35 ವರ್ಷದ ವೈದ್ಯರಿಗೆ ಸೋಂಕು ತಗುಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>