<p><strong>ದಾವಣಗೆರೆ: </strong>ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನಡುವೆ ತೀವ್ರ ವಾಗ್ವಾದ ನಡೆದಿದೆ.</p>.<p>ಸಚಿವ ಡಾ.ಕೆ. ಸುಧಾಕರ್ ಹಾಗೂ ಬೈರತಿ ಬಸವರಾಜ್ ನೇತೃತ್ವದಲ್ಲಿ ದಾವಣಗೆರೆಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಶಾಸಕ ಮಾಡಾಳ್ ವಿರುಪಾಕ್ಷಪ್ಪ ಕಿತ್ತಾಟ ನಡೆಸಿದ್ದಾರೆ. </p>.<p>ಜನರಿಗೆ ಉಚಿತವಾಗಿ ಶುದ್ದ ಕುಡಿಯುವ ಘಟಕದ ನೀರನ್ನು ನೀಡಬೇಕೆಂದು ಶಾಸಕರ ಮಾಡಾಳ್ ವೀರುಪಾಕ್ಷಪ್ಪ ಸಭೆಯಲ್ಲಿ ಒತ್ತಾಯಿಸಿದರು. ಇದೇ ಮಧ್ಯಪ್ರವೇಶಿಸಿದ ಸಂಸದ ಸಿದ್ದೇಶ್ವರ್, ಹಣ ನಿಮ್ಮಪ್ಪನ ಮನೆಯಿಂದ ಕೊಡುತ್ತೀಯಾ? ಎಂದು ಪ್ರಶ್ನೆಸಿದರು.<br /><br />ಸಂಸದರ ಮಾತಿಗೆ ತಿರುಗೇಟು ನೀಡಿದ ವೀರುಪಾಕ್ಷಪ್ಪ ಹಣ ನಿಮ್ಮಪ್ಪನ ಮನೆಯಿಂದ ಕೊಡ್ತಿಯಾ ಎಂದು ಪ್ರಶ್ನಿಸಿದರು. ಮಾತಿಗೆ ಮಾತು ಬೆಳೆದು ಸಚಿವರುಗಳ ಎದುರೇ ಶಾಸಕ- ಸಂಸದ ಹೊಡೆದಾಟಕ್ಕೆ ನಿಂತರು.</p>.<p>ಸ್ಥಳದಲ್ಲೇ ಇದ್ದ ಎಸ್ಪಿ ಹನುಮಂತರಾಯ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಶಾಸಕ– ಸಂಸದರನ್ನು ಸಮಾಧಾನಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಸಂಸದ ಜಿ.ಎಂ. ಸಿದ್ದೇಶ್ವರ್ ಹಾಗೂ ಶಾಸಕ ಮಾಡಾಳ್ ವಿರುಪಾಕ್ಷಪ್ಪ ನಡುವೆ ತೀವ್ರ ವಾಗ್ವಾದ ನಡೆದಿದೆ.</p>.<p>ಸಚಿವ ಡಾ.ಕೆ. ಸುಧಾಕರ್ ಹಾಗೂ ಬೈರತಿ ಬಸವರಾಜ್ ನೇತೃತ್ವದಲ್ಲಿ ದಾವಣಗೆರೆಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಮತ್ತು ಶಾಸಕ ಮಾಡಾಳ್ ವಿರುಪಾಕ್ಷಪ್ಪ ಕಿತ್ತಾಟ ನಡೆಸಿದ್ದಾರೆ. </p>.<p>ಜನರಿಗೆ ಉಚಿತವಾಗಿ ಶುದ್ದ ಕುಡಿಯುವ ಘಟಕದ ನೀರನ್ನು ನೀಡಬೇಕೆಂದು ಶಾಸಕರ ಮಾಡಾಳ್ ವೀರುಪಾಕ್ಷಪ್ಪ ಸಭೆಯಲ್ಲಿ ಒತ್ತಾಯಿಸಿದರು. ಇದೇ ಮಧ್ಯಪ್ರವೇಶಿಸಿದ ಸಂಸದ ಸಿದ್ದೇಶ್ವರ್, ಹಣ ನಿಮ್ಮಪ್ಪನ ಮನೆಯಿಂದ ಕೊಡುತ್ತೀಯಾ? ಎಂದು ಪ್ರಶ್ನೆಸಿದರು.<br /><br />ಸಂಸದರ ಮಾತಿಗೆ ತಿರುಗೇಟು ನೀಡಿದ ವೀರುಪಾಕ್ಷಪ್ಪ ಹಣ ನಿಮ್ಮಪ್ಪನ ಮನೆಯಿಂದ ಕೊಡ್ತಿಯಾ ಎಂದು ಪ್ರಶ್ನಿಸಿದರು. ಮಾತಿಗೆ ಮಾತು ಬೆಳೆದು ಸಚಿವರುಗಳ ಎದುರೇ ಶಾಸಕ- ಸಂಸದ ಹೊಡೆದಾಟಕ್ಕೆ ನಿಂತರು.</p>.<p>ಸ್ಥಳದಲ್ಲೇ ಇದ್ದ ಎಸ್ಪಿ ಹನುಮಂತರಾಯ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಶಾಸಕ– ಸಂಸದರನ್ನು ಸಮಾಧಾನಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>