ತೀವ್ರ ಉಸಿರಾಟದ ಸಮಸ್ಯೆಯಿಂದ (SARI) ಬಳಲುತ್ತಿದ್ದ ವೃದ್ಧ ಏಪ್ರಿಲ್ 28ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲಿನ ದ್ರಾವಣದ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ಮಧ್ಯರಾತ್ರಿ ಬಂದ ವರದಿಯು ಅವರಿಗೆ ಕೋವಿಡ್ ಇರುವ ಬಗ್ಗೆ ದೃಢಪಡಿಸಿತ್ತು. ಇವರ ಆರೋಗ್ಯದ ಮೇಲೆ ನಿಗಾ ವಹಿಸಲು ತಜ್ಞ ವೈದ್ಯರ ಸಮಿತಿಯನ್ನೂ ನೇಮಿಸಲಾಗಿತ್ತು. ಆದರೆ, ಶುಕ್ರವಾರ ರಾತ್ರಿ ವೃದ್ಧ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.