<p><strong>ಬೆಂಗಳೂರು:</strong> 'ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ- ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.</p>.<p>ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, 'ಯಾವುದೇ ಯೋಜನೆಯಲ್ಲಿ ಕಡಿಮೆ ಮಾಡಿದರೂ ಸರಿಯೇ. ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿಯೇ ಪ್ಯಾಕೇಜ್ ಪ್ರಕಟಿಸಬೇಕು' ಎಂದರು.</p>.<p>'ಕೊರೊನಾ ಹರಡದಂತೆ ಎಲ್ಲರೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ಪ್ರಧಾನಿಯವರ ಭಾಷಣಕ್ಕೆ ನಮ್ಮ ಬೆಂಬಲವಿದೆ. ರೋಗ ನಿಯಂತ್ರಣಕ್ಕೆ ಅಗತ್ಯವಾದ ಸಹಕಾರ ನೀಡಲು ಪಕ್ಷ ಸಿದ್ದವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಇದನ್ನು ಎದುರಿಸಬೇಕಿದೆ. ರಾಜ್ಯದ ಜನರು ಕೂಡಾ ಕೈಜೋಡಿಸಬೇಕಿದೆ' ಎಂದರು.</p>.<p>'ಕೊರೊನಾ ಸೋಂಕಿನಿಂದ ಉಂಟಾಗುವ ನಷ್ಟದ ಬಗ್ಗೆ ರಾಷ್ಟ್ರ ವ್ಯಾಪಿ ಸಮೀಕ್ಷೆ ನಡೆಸಬೇಕು. ತಡವಾಗಿಯಾದರೂ ಸರ್ಕಾರ ಸರ್ವೆ ತಂಡ ರಚಿಸಬೇಕು' ಎಂದೂ ಆಗ್ರಹಿಸಿದರು.</p>.<p>'ರೈತರು ಬೆಳೆದ ಬೆಳೆ ನಷ್ಟವಾಗಿದೆ. ಕೋಳಿ, ಹೈನುಗಾರಿಕೆಗೆ ತೀವ್ರ ಹೊಡೆತ ಬಿದ್ದಿದೆ. ಬೀದಿಬದಿ ವ್ಯಾಪಾರ, ದೊಡ್ಡ ವ್ಯವಹಾರಕ್ಕೂ ಪೆಟ್ಟು ಬಿದ್ದಿದೆ. ಅವರ ನೆರವಿಗೂ ಸರ್ಕಾರ ಬರಬೇಕು. ಈಗಾಗಲೇ ಬ್ಯಾಂಕ್, ಐ.ಟಿ, ಜಿಎಸ್ಟಿ ಒತ್ತಡ ಹೆಚ್ಚುತ್ತಿದೆ. ಸಾಲ, ತೆರಿಗೆ ಮರುಪಾವತಿಗೆ ಒತ್ತಾಯ ಹಾಕಲಾಗುತ್ತದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು' ಎಂದರು.</p>.<p>'ಸೋಂಕು ತಡೆಗೆ ಸರ್ಕಾರಿ ಆಸ್ಪತ್ರೆ ಮಾತ್ರ ನಂಬಿಕೊಂಡರೆ ಕಷ್ಟ. ಖಾಸಗಿ ಆಡಳಿತದ ಆಸ್ಪತ್ರೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನೂ ಬಳಸಿಕೊಳ್ಳಬೇಕು. ಉದ್ಯಮಿಗಳು, ಖಾಸಗಿ ಆಸ್ಪತ್ರೆ, ಸಂಘಟನೆಗಳು ಕೈಜೋಡಿಸಬೇಕು. ಸಮಾರೋಪಾದಿಯಲ್ಲಿ ಕೆಲಸ ನಡೆಯಬೇಕು ಎಂದರು.</p>.<p>'ಪಿಂಚಣಿ ಯೋಜನೆಗೆ ಯಾವುದೇ ತೊಂದರೆ ಆಗಬಾರದು. ದಿನನಿತ್ಯದ ಬಳಕೆ ವಸ್ತುಗಳು ಲಭ್ಯವಾಗಬೇಕು. ಕೆಲವು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕೆಲವು ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ಈ ಬಗ್ಗೆಯೂ ಸರ್ಕಾರ ಗಮನಹರಿಸಬೇಕು. ಜನಸಾಮಾನ್ಯರ ದೈನಂದಿನ ಜೀವನಕ್ಕೆ ತೊಂದರೆ ಆಗಬಾರದು. ಬ್ಯಾಂಕ್ ಸಾಲದ ಬಡ್ಡಿ ಕಟ್ಟಲು ಸಮಯಾವಕಾಶ ಮಾಡಿಕೊಡಬೇಕು' ಎಂದು ಮನವಿ ಮಾಡಿದರು.</p>.<p>'ಪಕ್ಷದ ಕಾರ್ಯಕರ್ತರು ಅಭಿನಂದನೆ ಸಲ್ಲಿಸಲು ಒಂದು ವಾರದವರೆಗೆ ಬರಬೇಡಿ. ನೀವು ಇರುವಲ್ಲಿಯೇ ಇದ್ದರೆ ಉತ್ತಮ. ಹೀಗೆ ಮಾಡುವುದರಿಂದ ಸೋಂಕು ತಡೆಯಲು ನೆರವಾಗಬಹುದು' ಎಂದು ಬೆಂಬಲಿಗರಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಕೊರೊನಾ ಸೋಂಕು ತಡೆಗಟ್ಟಲು ಕೇಂದ್ರ- ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.</p>.<p>ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, 'ಯಾವುದೇ ಯೋಜನೆಯಲ್ಲಿ ಕಡಿಮೆ ಮಾಡಿದರೂ ಸರಿಯೇ. ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿಯೇ ಪ್ಯಾಕೇಜ್ ಪ್ರಕಟಿಸಬೇಕು' ಎಂದರು.</p>.<p>'ಕೊರೊನಾ ಹರಡದಂತೆ ಎಲ್ಲರೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ. ಪ್ರಧಾನಿಯವರ ಭಾಷಣಕ್ಕೆ ನಮ್ಮ ಬೆಂಬಲವಿದೆ. ರೋಗ ನಿಯಂತ್ರಣಕ್ಕೆ ಅಗತ್ಯವಾದ ಸಹಕಾರ ನೀಡಲು ಪಕ್ಷ ಸಿದ್ದವಾಗಿದೆ. ಎಲ್ಲರೂ ಒಗ್ಗಟ್ಟಿನಿಂದ ಇದನ್ನು ಎದುರಿಸಬೇಕಿದೆ. ರಾಜ್ಯದ ಜನರು ಕೂಡಾ ಕೈಜೋಡಿಸಬೇಕಿದೆ' ಎಂದರು.</p>.<p>'ಕೊರೊನಾ ಸೋಂಕಿನಿಂದ ಉಂಟಾಗುವ ನಷ್ಟದ ಬಗ್ಗೆ ರಾಷ್ಟ್ರ ವ್ಯಾಪಿ ಸಮೀಕ್ಷೆ ನಡೆಸಬೇಕು. ತಡವಾಗಿಯಾದರೂ ಸರ್ಕಾರ ಸರ್ವೆ ತಂಡ ರಚಿಸಬೇಕು' ಎಂದೂ ಆಗ್ರಹಿಸಿದರು.</p>.<p>'ರೈತರು ಬೆಳೆದ ಬೆಳೆ ನಷ್ಟವಾಗಿದೆ. ಕೋಳಿ, ಹೈನುಗಾರಿಕೆಗೆ ತೀವ್ರ ಹೊಡೆತ ಬಿದ್ದಿದೆ. ಬೀದಿಬದಿ ವ್ಯಾಪಾರ, ದೊಡ್ಡ ವ್ಯವಹಾರಕ್ಕೂ ಪೆಟ್ಟು ಬಿದ್ದಿದೆ. ಅವರ ನೆರವಿಗೂ ಸರ್ಕಾರ ಬರಬೇಕು. ಈಗಾಗಲೇ ಬ್ಯಾಂಕ್, ಐ.ಟಿ, ಜಿಎಸ್ಟಿ ಒತ್ತಡ ಹೆಚ್ಚುತ್ತಿದೆ. ಸಾಲ, ತೆರಿಗೆ ಮರುಪಾವತಿಗೆ ಒತ್ತಾಯ ಹಾಕಲಾಗುತ್ತದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು' ಎಂದರು.</p>.<p>'ಸೋಂಕು ತಡೆಗೆ ಸರ್ಕಾರಿ ಆಸ್ಪತ್ರೆ ಮಾತ್ರ ನಂಬಿಕೊಂಡರೆ ಕಷ್ಟ. ಖಾಸಗಿ ಆಡಳಿತದ ಆಸ್ಪತ್ರೆಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನೂ ಬಳಸಿಕೊಳ್ಳಬೇಕು. ಉದ್ಯಮಿಗಳು, ಖಾಸಗಿ ಆಸ್ಪತ್ರೆ, ಸಂಘಟನೆಗಳು ಕೈಜೋಡಿಸಬೇಕು. ಸಮಾರೋಪಾದಿಯಲ್ಲಿ ಕೆಲಸ ನಡೆಯಬೇಕು ಎಂದರು.</p>.<p>'ಪಿಂಚಣಿ ಯೋಜನೆಗೆ ಯಾವುದೇ ತೊಂದರೆ ಆಗಬಾರದು. ದಿನನಿತ್ಯದ ಬಳಕೆ ವಸ್ತುಗಳು ಲಭ್ಯವಾಗಬೇಕು. ಕೆಲವು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕೆಲವು ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ಈ ಬಗ್ಗೆಯೂ ಸರ್ಕಾರ ಗಮನಹರಿಸಬೇಕು. ಜನಸಾಮಾನ್ಯರ ದೈನಂದಿನ ಜೀವನಕ್ಕೆ ತೊಂದರೆ ಆಗಬಾರದು. ಬ್ಯಾಂಕ್ ಸಾಲದ ಬಡ್ಡಿ ಕಟ್ಟಲು ಸಮಯಾವಕಾಶ ಮಾಡಿಕೊಡಬೇಕು' ಎಂದು ಮನವಿ ಮಾಡಿದರು.</p>.<p>'ಪಕ್ಷದ ಕಾರ್ಯಕರ್ತರು ಅಭಿನಂದನೆ ಸಲ್ಲಿಸಲು ಒಂದು ವಾರದವರೆಗೆ ಬರಬೇಡಿ. ನೀವು ಇರುವಲ್ಲಿಯೇ ಇದ್ದರೆ ಉತ್ತಮ. ಹೀಗೆ ಮಾಡುವುದರಿಂದ ಸೋಂಕು ತಡೆಯಲು ನೆರವಾಗಬಹುದು' ಎಂದು ಬೆಂಬಲಿಗರಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>