ಸಮಯ, ಕುಟುಂಬ, ಆರೋಗ್ಯ ಲೆಕ್ಕಿಸದೇ ಧೈರ್ಯದಿಂದ ಹೋರಾಡುತ್ತಿರುವ ವೈದ್ಯಕೀಯ ವೃಂದ, ಪೊಲೀಸರು, ಪೌರಕಾರ್ಮಿಕರ ಪರಿಶ್ರಮವನ್ನು ಗೌರವಿಸಬೇಕು. ಪ್ರೋತ್ಸಾಹ ಧನದ ಮೂಲಕ ನೈತಿಕ, ಆರ್ಥಿಕ ಬೆಂಬಲ ನೀಡಬೇಕು. ಇಷ್ಟೇ ಅಲ್ಲ, ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಎಲ್ಲರಿಗೂ 'ಗೌರವ ಪತ್ರ' ನೀಡಿ ಅವರ ಹೋರಾಟವನ್ನು ಅಜರಾಮರಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.