ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಗ್ಗೆ 23ರಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ಸೋಮವಾರ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಲಾಗುವುದು. ಜೊತೆಗೆ, ಮುಖ್ಯಮಂತ್ರಿ ಅವರೊಂದಿಗೂ ಚರ್ಚಿಸುತ್ತೇವೆ ಆ ಬಳಿಕ ನಿರ್ಧಾರ ಪ್ರಕಟಿಸಲಾಗುವುದು ಎಂದರು.