ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಈ ಸಂಬಂಧ ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ, ಕಂದಾಯ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಆಹಾರ, ವಾರ್ತಾ, ಸಾರಿಗೆ, ಪಶು ವೈದ್ಯಕೀಯ ಮತ್ತು ಇಂಧನ ಇಲಾಖೆಗಳನ್ನು ಅತ್ಯಗತ್ಯ ಇಲಾಖೆಗಳೆಂದು ಪರಿಗಣಿಸಲಾಗಿದೆ.