<p><strong>ಯರಗೋಳ (ಯಾದಗಿರಿ ಜಿಲ್ಲೆ): </strong>ಜಿಲ್ಲೆಯ ಯರಗೋಳ ಗ್ರಾಮದ ಜನತೆಯಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಾಗಿದ್ದು, ಬೇರೆ ಗ್ರಾಮದ ಜನತೆ ಪ್ರವೇಶ ಮಾಡದಂತೆ ತಡೆಯಲು ಗ್ರಾಮದ ಹೊರವಲಯದಲ್ಲಿರುವ ಯಾಗಾಪುರ ರಸ್ತೆಯನ್ನು ತುಂಡರಿಸಿದ್ದಾರೆ.</p>.<p>ದೇಶದಲ್ಲಿ ಪ್ರಥಮವಾಗಿ ಕೊರೊನಾ ವೈರಸ್ ಸೋಂಕಿಗೆ ಬಲಿಯಾದ ಕಲಬುರ್ಗಿ ಜಿಲ್ಲೆಯ 76 ವರ್ಷದ ವೃದ್ಧ ಸಿದ್ಧಿಕಿ ಮೃತರಾದ ನಂತರ ಕಲಬುರ್ಗಿ ಜಿಲ್ಲೆಗೆ ಹೊಂದಿಕೊಂಡಿರುವ ಗ್ರಾಮದಲ್ಲಿ ಆತಂಕ ಶುರುವಾಗಿದೆ.</p>.<p>ಯರಗೋಳ ಗ್ರಾಮದಿಂದ 3 ಕಿ. ಮೀಟರ್ ದೂರದಲ್ಲಿ ಕಲಬುರ್ಗಿ ಜಿಲ್ಲೆಯ ನಾಲವಾರ ರೈಲು ನಿಲ್ದಾಣಕ್ಕೆ ವಾರದ ಹಿಂದೆ ನೂರಾರು ಸಂಖ್ಯೆಯ ಜನರು ಬೆಂಗಳೂರು ಮತ್ತು ಮುಂಬಯಿ ನಗರದಿಂದ ಆಗಮಿಸಿದ್ದಾರೆ.</p>.<p>ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ತಾಂಡ ನಿವಾಸಿಗಳು ಮತ್ತು ಗ್ರಾಮಸ್ಥರು ಮುಂಬಯಿಯ ಮೀನು ಉದ್ಯಮ ಮತ್ತು ಬೆಂಗಳೂರಿನ ಕಟ್ಟಡ ಕಟ್ಟುವ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಲಾಡ್ಲಾಪುರ ಜಾತ್ರೆ ಮತ್ತು ಯುಗಾದಿ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ಸಾವಿರಾರು ಸಂಖ್ಯೆಯ ಜನರು ಆಗಮಿಸಿದ್ದರು.</p>.<p>ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗಿದ್ದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದ್ದು,<br />ನಮ್ಮ ಗ್ರಾಮದ ಜನತೆಗೆ ಕೊರೊನಾ ಸೋಂಕು ತಗಲದಂತೆ ಮುನ್ನೆಚ್ಚರಿಕೆಯಾಗಿ ರಸ್ತೆಯನ್ನು ತುಂಡರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗೋಳ (ಯಾದಗಿರಿ ಜಿಲ್ಲೆ): </strong>ಜಿಲ್ಲೆಯ ಯರಗೋಳ ಗ್ರಾಮದ ಜನತೆಯಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಾಗಿದ್ದು, ಬೇರೆ ಗ್ರಾಮದ ಜನತೆ ಪ್ರವೇಶ ಮಾಡದಂತೆ ತಡೆಯಲು ಗ್ರಾಮದ ಹೊರವಲಯದಲ್ಲಿರುವ ಯಾಗಾಪುರ ರಸ್ತೆಯನ್ನು ತುಂಡರಿಸಿದ್ದಾರೆ.</p>.<p>ದೇಶದಲ್ಲಿ ಪ್ರಥಮವಾಗಿ ಕೊರೊನಾ ವೈರಸ್ ಸೋಂಕಿಗೆ ಬಲಿಯಾದ ಕಲಬುರ್ಗಿ ಜಿಲ್ಲೆಯ 76 ವರ್ಷದ ವೃದ್ಧ ಸಿದ್ಧಿಕಿ ಮೃತರಾದ ನಂತರ ಕಲಬುರ್ಗಿ ಜಿಲ್ಲೆಗೆ ಹೊಂದಿಕೊಂಡಿರುವ ಗ್ರಾಮದಲ್ಲಿ ಆತಂಕ ಶುರುವಾಗಿದೆ.</p>.<p>ಯರಗೋಳ ಗ್ರಾಮದಿಂದ 3 ಕಿ. ಮೀಟರ್ ದೂರದಲ್ಲಿ ಕಲಬುರ್ಗಿ ಜಿಲ್ಲೆಯ ನಾಲವಾರ ರೈಲು ನಿಲ್ದಾಣಕ್ಕೆ ವಾರದ ಹಿಂದೆ ನೂರಾರು ಸಂಖ್ಯೆಯ ಜನರು ಬೆಂಗಳೂರು ಮತ್ತು ಮುಂಬಯಿ ನಗರದಿಂದ ಆಗಮಿಸಿದ್ದಾರೆ.</p>.<p>ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ತಾಂಡ ನಿವಾಸಿಗಳು ಮತ್ತು ಗ್ರಾಮಸ್ಥರು ಮುಂಬಯಿಯ ಮೀನು ಉದ್ಯಮ ಮತ್ತು ಬೆಂಗಳೂರಿನ ಕಟ್ಟಡ ಕಟ್ಟುವ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಲಾಡ್ಲಾಪುರ ಜಾತ್ರೆ ಮತ್ತು ಯುಗಾದಿ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ಸಾವಿರಾರು ಸಂಖ್ಯೆಯ ಜನರು ಆಗಮಿಸಿದ್ದರು.</p>.<p>ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗಿದ್ದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದ್ದು,<br />ನಮ್ಮ ಗ್ರಾಮದ ಜನತೆಗೆ ಕೊರೊನಾ ಸೋಂಕು ತಗಲದಂತೆ ಮುನ್ನೆಚ್ಚರಿಕೆಯಾಗಿ ರಸ್ತೆಯನ್ನು ತುಂಡರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>