ಮಡಿಕೇರಿ: ಇಲ್ಲಿನ ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ ನಿಗಾ ವಹಿಸಲಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಗುರುವಾರ ಟ್ವೀಟ್ ಮಾಡಿದ್ದಾರೆ.
ಆ ವ್ಯಕ್ತಿ ಸೌದಿಯಿಂದ ಕೊಡಗಿಗೆ ವಾಪಸ್ಸಾಗಿದ್ದರು ಎನ್ನಲಾಗಿದೆ . ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ಶಂಕಿತರು ಇದ್ದಾರೆ. ಅದರಲ್ಲಿ ಯಾರಿಗೆ ಸೋಂಕು ದೃಢವಾಗಿದೆ ಎಂಬ ಗೊಂದಲವಿದೆ. ಮಾಹಿತಿಗೆ ಜಿಲ್ಲಾಡಳಿತ ಪರದಾಡುತ್ತಿದೆ. ಸಚಿವರ ಟ್ವೀಟ್ ಬಳಿಕ ಜಿಲ್ಲಾಧಿಕಾರಿ ಹಾಗೂ ಡಿಎಚ್ಒ ಮಾಹಿತಿ ಕಲೆ ಹಾಕುತ್ತಿದ್ದಾರೆ.