ಈ ಮಾರುಕಟ್ಟೆಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ಭರದಿಂದ ಸಾಗಿದೆ. ಗಿಡಗಂಟಿಗಳು ಬೆಳೆದಿದ್ದರಿಂದ ವ್ಯಾಪಾರ ಮಾಡಲು ಕಷ್ಟ ಎಂದು ವ್ಯಾಪಾರಿಗಳು ದೂರಿದರು. ಹಾಗಾಗಿ, ಜೆಸಿಬಿ ಯಂತ್ರಗಳ ಸಹಾಯದಿಂದ ಗಿಡಗಂಟಿಗಳನ್ನು ತೆರವು ಮಾಡಲಾಗುತ್ತಿದೆ. ಸಂಜೆ ಹೊತ್ತಿಗೆ ಈ ಕಾರ್ಯ ಮುಗಿಯಲಿದ್ದು, ಶನಿವಾರ ಸಂಪೂರ್ಣ ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.