ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್ ಮಧ್ಯೆಯೂ ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಜನಜಂಗುಳಿ

ವಿಡಿಯೊ ಸುದ್ದಿ
Last Updated 27 ಮಾರ್ಚ್ 2020, 6:26 IST
ಅಕ್ಷರ ಗಾತ್ರ

ಮೈಸೂರು: ಕೊರೊನಾ‌‌ ವೈರಸ್ ಹರಡುವಿಕೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿರುವ ಮಧ್ಯೆಯೂ ಎಂದಿನಂತೆ ಸಾರ್ವಜನಿಕರು ಗುಂಪುಗೂಡಿ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ಖರೀದಿ ಮಾಡುತ್ತಿದ್ದ ದೃಶ್ಯ ಶುಕ್ರವಾರ ಕಂಡು ಬಂತು.

ಈ ಮಾರುಕಟ್ಟೆಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಸ್ಥಳಾಂತರ ಮಾಡುವ ಪ್ರಕ್ರಿಯೆ ಭರದಿಂದ ಸಾಗಿದೆ. ಗಿಡಗಂಟಿಗಳು ಬೆಳೆದಿದ್ದರಿಂದ ವ್ಯಾಪಾರ ಮಾಡಲು ಕಷ್ಟ ಎಂದು ವ್ಯಾಪಾರಿಗಳು ದೂರಿದರು. ಹಾಗಾಗಿ, ಜೆಸಿಬಿ ಯಂತ್ರಗಳ ಸಹಾಯದಿಂದ ಗಿಡಗಂಟಿಗಳನ್ನು ತೆರವು ಮಾಡಲಾಗುತ್ತಿದೆ. ಸಂಜೆ ಹೊತ್ತಿಗೆ ಈ ಕಾರ್ಯ ಮುಗಿಯಲಿದ್ದು, ಶನಿವಾರ ಸಂಪೂರ್ಣ ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆದರೆ, ಬನ್ನೂರಿನಲ್ಲಿ ಸದಾ ಗಿಜಿಗುಡುತ್ತಿದ್ದ ತರಕಾರಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಿ, ಕೆಲವೇ ಮಂದಿಯನ್ನು ಒಳಗೆ ಬಿಡಲಾಗುತ್ತಿದೆ.

ನಗರದಲ್ಲಿ ರಸ್ತೆಬದಿ ತಂಗಿದ್ದ ಸುಮಾರು ನೂರಕ್ಕೂ ಅಧಿಕ ಮಂದಿಯನ್ನು ಇಲ್ಲಿನ ಯೂತ್ ಹಾಸ್ಟೆಲ್‌ಗೆ ಪಾಲಿಕೆ ರವಾನಿಸುತ್ತಿದೆ. 120 ಮಂದಿಗೆ ಇಲ್ಲಿ ಅವಕಾಶ ಇದ್ದು, ಇನ್ನುಳಿದವರನ್ನು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಇರಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ ಹೆಗಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT