ಬೆಂಗಳೂರು: ಕೊರೊನಾ ವೈರಸ್ ಸೋಂಕು ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಭಾನುವಾರ ಸಚಿವರು, ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಜೊತೆಗೆ, ಜನರ ಆರೋಗ್ಯ ರಕ್ಷಣೆಗೆ, ಈ ಬಿಕ್ಕಟ್ಟಿನ ಅವಧಿಯಲ್ಲಿ ಇತರ ಸಮಸ್ಯೆಗಳು ಉಂಟಾಗದಂತೆ ಕೆಲವು ಕಟ್ಟು ನಿಟ್ಟಿನ ಕ್ರಮಗಳನ್ನು ಘೋಷಿಸಿದ್ದಾರೆ.