ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ಕೊರೊನಾ ವೈರಸ್ ಭೀತಿ: 203 ವಿಚಾರಣಾಧೀನ ಕೈದಿಗಳಿಗೆ ಜಾಮೀನು

Last Updated 1 ಏಪ್ರಿಲ್ 2020, 17:42 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್ ಹರಡುವಿಕೆ ತಡೆಯುವ ಹಿನ್ನೆಲೆಯಲ್ಲಿ ಏಳು ವರ್ಷಕ್ಕಿಂತ ಕಡಿಮೆ ಅವಧಿಗೆ ಶಿಕ್ಷೆ ವಿಧಿಸಬಹುದಾದ ಅಪರಾಧ ಕೃತ್ಯದಡಿಯ ವಿಚಾರಣಾಧೀನ ಕೈದಿಗಳಿಗೆ ಮಧ್ಯಂತರ ಜಾಮೀನು ನೀಡುವ ಪ್ರಕಿಯೆ ಆರಂಭವಾಗಿದೆ.

ರಾಜ್ಯದ ವಿವಿಧ ಜೈಲುಗಳಲ್ಲಿರುವ ಒಟ್ಟು 203 ವಿಚಾರಣಾಧೀನ ಕೈದಿಗಳಿಗೆ ಸ್ಥಳೀಯ ಜಿಲ್ಲಾ ನ್ಯಾಯಾಲಯಗಳು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿವೆ.

ಬೀದರ್ 7, ದಾವಣಗೆರೆ 21, ಚಿತ್ರದುರ್ಗ 8, ಕೊಡಗು 11, ಧಾರವಾಡ 21, ವಿಜಯಪುರ 10, ಬಾಗಲಕೋಟೆ 23, ಮೈಸೂರು 70, ಮಂಡ್ಯ 14, ಚಿತ್ರದುರ್ಗ 18 ಮಂದಿ ವಿಚಾರಣಾಧೀನ ಕೈದಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಬಸವರಾಜು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT