<p><strong>ಬಳ್ಳಾರಿ:</strong> ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೃದ್ಧೆಯು ಕೊರೊನಾಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>ನಗರದಲ್ಲಿ ಗುರುವಾರ ವೈದ್ಯರೊಂದಿಗೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಲಬುರ್ಗಿಯ ಈ ಮುಂಚೆ ಮೃತಪಟ್ಟವರು ಸೇರಿದಂತೆ ಈಗ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ ಎಂದರು.</p>.<p>ರಾಜ್ಯದಲ್ಲಿ ಇದುವರೆಗೆ 1.30 ಲಕ್ಷ ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು,214 ಮಂದಿಯನ್ನು ಪ್ರತ್ಯೇಕ ವಾರ್ಡ್ ನಲ್ಲಿರಿಸಲಾಗಿದೆ. 2500 ಮಂದಿಯ ಗಂಟಲು ದ್ರವವನ್ನು ಸಂಗ್ರಹಿಸಲಾಗಿದ್ದು,2248 ಮಂದಿಗೆ ಸೋಂಕಿಲ್ಲ. ಆದರೆ 52 ಮಂದಿಗೆ ಸೋಂಕಿದೆ ಎಂದು ತಿಳಿಸಿದರು.</p>.<p>ಲಾಕ್ಡೌನ್ ನಿಯಮ ಮೀರಿ ಬೀದಿಗೆ ಬರುತ್ತಿರುವವರನ್ನು ಹಿಮ್ಮೆಟ್ಟಿಸಲು ಪೊಲೀಸರು ಲಾಠಿ ಬೀಸುತ್ತಿದ್ದಾರೆ. ಅದಕ್ಕೆ ಮುನ್ನವೇ ಜನ ಎಚ್ಚೆತ್ತುಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವೃದ್ಧೆಯು ಕೊರೊನಾಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದರು.</p>.<p>ನಗರದಲ್ಲಿ ಗುರುವಾರ ವೈದ್ಯರೊಂದಿಗೆ ಸಭೆ ನಡೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕಲಬುರ್ಗಿಯ ಈ ಮುಂಚೆ ಮೃತಪಟ್ಟವರು ಸೇರಿದಂತೆ ಈಗ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ ಎಂದರು.</p>.<p>ರಾಜ್ಯದಲ್ಲಿ ಇದುವರೆಗೆ 1.30 ಲಕ್ಷ ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು,214 ಮಂದಿಯನ್ನು ಪ್ರತ್ಯೇಕ ವಾರ್ಡ್ ನಲ್ಲಿರಿಸಲಾಗಿದೆ. 2500 ಮಂದಿಯ ಗಂಟಲು ದ್ರವವನ್ನು ಸಂಗ್ರಹಿಸಲಾಗಿದ್ದು,2248 ಮಂದಿಗೆ ಸೋಂಕಿಲ್ಲ. ಆದರೆ 52 ಮಂದಿಗೆ ಸೋಂಕಿದೆ ಎಂದು ತಿಳಿಸಿದರು.</p>.<p>ಲಾಕ್ಡೌನ್ ನಿಯಮ ಮೀರಿ ಬೀದಿಗೆ ಬರುತ್ತಿರುವವರನ್ನು ಹಿಮ್ಮೆಟ್ಟಿಸಲು ಪೊಲೀಸರು ಲಾಠಿ ಬೀಸುತ್ತಿದ್ದಾರೆ. ಅದಕ್ಕೆ ಮುನ್ನವೇ ಜನ ಎಚ್ಚೆತ್ತುಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>