<p><strong>ಬೆಂಗಳೂರು:</strong> ಕೊರೊನಾ ವೈರಸ್ ಹರಡುವಿಕೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ. ಒಂದು ವಾರದವರೆಗೆ ಮಾಲ್, ಚಿತ್ರಮಂದಿರ, ಸಭೆ, ಸಮಾರಂಭ ಸ್ಥಗಿತಗೊಳಿಸಿರುವುದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ ಬೀರಲಿದೆ.</p>.<p>ರಾಜ್ಯದ ಐ.ಟಿ ವಲಯವು ಮಾನವಸಂಪನ್ಮೂಲದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಆದರೆ, ಸೋಂಕು ಹರಡುವ ಭೀತಿಯಿಂದಾಗಿ ಜನರು ಹೊರಬರಲು ಹೆದರುತ್ತಿದ್ದಾರೆ. ಇದರಿಂದಾಗಿ ನಿಗದಿಪಡಿಸಿದ ಅವಧಿಗೆ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಈ ರೀತಿ ಯೋಜನೆಯಲ್ಲಿ ವಿಳಂಬ ಆಗುತ್ತಿರುವುದರಿಂದ ಚೀನಾದಲ್ಲಿರುವ ಐ.ಟಿ. ಕಂಪನಿಗಳು ಭಾರತವನ್ನು ಬಿಟ್ಟು ಮಲೇಷ್ಯಾ ಮತ್ತು ವಿಯೆಟ್ನಾಂನತ್ತ ಮುಖಮಾಡುತ್ತಿವೆ.</p>.<p>ರಾಜ್ಯದ ಬೊಕ್ಕಸಕ್ಕೆ ಜಿಎಸ್ಟಿ ಮತ್ತು ಮಾರಾಟ ತೆರಿಗೆ ವರಮಾನದಲ್ಲಿ ಕನಿಷ್ಠ ₹ 2 ಸಾವಿರ ಕೋಟಿ ನಷ್ಟವಾಗಲಿದೆ ಎಂದು ಎಫ್ಕೆಸಿಸಿಐನ ತೆರಿಗೆ ತಜ್ಞ ಬಿ.ಟಿ. ಮನೋಹರ್ ಹೇಳಿದ್ದಾರೆ.</p>.<p>ತಯಾರಿಕಾ ವಲಯದ ಕಾರ್ಮಿಕರು ಮನೆಯಿಂದ ಕೆಲಸ ಮಾಡಲು ಸಾಧ್ಯವಿಲ್ಲ. ಇದು ತಯಾರಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಬಿಸಿಐಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪೂರೈಕೆ ಮತ್ತು ಸರಕುಸಾಗಣೆ ಉದ್ಯಮ ಹೆಚ್ಚು ಸಂಕಷ್ಟಕ್ಕೆ ಒಳಗಾಗಿದೆ. ಬೆಂಗಳೂರಿನಲ್ಲಿ ಇರುವ ಆಟೊಮೊಬೈಲ್ ಕಂಪನಿಗಳು ಬಿಡಿಭಾಗಗಳ ಪೂರೈಕೆ ಕೊರತೆ ಎದುರಿಸುತ್ತಿವೆ. ಜಪಾನ್, ಇಂಡೋನೇಷ್ಯಾ, ಥಾಯ್ಲೆಂಡ್ನಿಂದ ಪೂರೈಕೆ ಕಡಿಮೆಯಾಗಿದೆ.</p>.<p>ಸದ್ಯ, ಬೆಂಗಳೂರಿನಲ್ಲಿ 24 ಮಾಲ್ಗಳಿದ್ದು, ಅವುಗಳಲ್ಲಿ 21 ಸಿನಿಪ್ಲೆಕ್ಸ್ಗಳಿವೆ. ರಾಜ್ಯದಲ್ಲಿ 38 ಮಲ್ಟಿಪ್ಲೆಕ್ಸ್ಗಳು ಮತ್ತು 40 ಮಾಲ್ಗಳಿವೆ. ಇದಲ್ಲದೆ ರಾಜ್ಯದಲ್ಲಿ 600ಕ್ಕೂ ಅಧಿಕ ಚಿತ್ರಮಂದಿರಗಳಿವೆ. ಅಲ್ಪಾವಧಿಗೆ ಈ ಮಾಲ್ಗಳು ಮತ್ತು ಮಲ್ಟಿಪ್ಲೆಕ್ಸ್<br />ಗಳು ಮುಚ್ಚಿದರೆ ಹೆಚ್ಚಿನ ಆರ್ಥಿಕ ನಷ್ಟ ಅನುಭವಿಸಲಿವೆ ಎಂದು ಆನಾರ್ಕ್ ರಿಟೇಲ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ವೈರಸ್ ಹರಡುವಿಕೆ ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಹಲವು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ. ಒಂದು ವಾರದವರೆಗೆ ಮಾಲ್, ಚಿತ್ರಮಂದಿರ, ಸಭೆ, ಸಮಾರಂಭ ಸ್ಥಗಿತಗೊಳಿಸಿರುವುದರಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯ ಮೇಲೆ ಪರಿಣಾಮ ಬೀರಲಿದೆ.</p>.<p>ರಾಜ್ಯದ ಐ.ಟಿ ವಲಯವು ಮಾನವಸಂಪನ್ಮೂಲದ ಮೇಲೆ ಹೆಚ್ಚು ಅವಲಂಬಿತವಾಗಿದೆ. ಆದರೆ, ಸೋಂಕು ಹರಡುವ ಭೀತಿಯಿಂದಾಗಿ ಜನರು ಹೊರಬರಲು ಹೆದರುತ್ತಿದ್ದಾರೆ. ಇದರಿಂದಾಗಿ ನಿಗದಿಪಡಿಸಿದ ಅವಧಿಗೆ ಯೋಜನೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಈ ರೀತಿ ಯೋಜನೆಯಲ್ಲಿ ವಿಳಂಬ ಆಗುತ್ತಿರುವುದರಿಂದ ಚೀನಾದಲ್ಲಿರುವ ಐ.ಟಿ. ಕಂಪನಿಗಳು ಭಾರತವನ್ನು ಬಿಟ್ಟು ಮಲೇಷ್ಯಾ ಮತ್ತು ವಿಯೆಟ್ನಾಂನತ್ತ ಮುಖಮಾಡುತ್ತಿವೆ.</p>.<p>ರಾಜ್ಯದ ಬೊಕ್ಕಸಕ್ಕೆ ಜಿಎಸ್ಟಿ ಮತ್ತು ಮಾರಾಟ ತೆರಿಗೆ ವರಮಾನದಲ್ಲಿ ಕನಿಷ್ಠ ₹ 2 ಸಾವಿರ ಕೋಟಿ ನಷ್ಟವಾಗಲಿದೆ ಎಂದು ಎಫ್ಕೆಸಿಸಿಐನ ತೆರಿಗೆ ತಜ್ಞ ಬಿ.ಟಿ. ಮನೋಹರ್ ಹೇಳಿದ್ದಾರೆ.</p>.<p>ತಯಾರಿಕಾ ವಲಯದ ಕಾರ್ಮಿಕರು ಮನೆಯಿಂದ ಕೆಲಸ ಮಾಡಲು ಸಾಧ್ಯವಿಲ್ಲ. ಇದು ತಯಾರಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಬಿಸಿಐಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಪೂರೈಕೆ ಮತ್ತು ಸರಕುಸಾಗಣೆ ಉದ್ಯಮ ಹೆಚ್ಚು ಸಂಕಷ್ಟಕ್ಕೆ ಒಳಗಾಗಿದೆ. ಬೆಂಗಳೂರಿನಲ್ಲಿ ಇರುವ ಆಟೊಮೊಬೈಲ್ ಕಂಪನಿಗಳು ಬಿಡಿಭಾಗಗಳ ಪೂರೈಕೆ ಕೊರತೆ ಎದುರಿಸುತ್ತಿವೆ. ಜಪಾನ್, ಇಂಡೋನೇಷ್ಯಾ, ಥಾಯ್ಲೆಂಡ್ನಿಂದ ಪೂರೈಕೆ ಕಡಿಮೆಯಾಗಿದೆ.</p>.<p>ಸದ್ಯ, ಬೆಂಗಳೂರಿನಲ್ಲಿ 24 ಮಾಲ್ಗಳಿದ್ದು, ಅವುಗಳಲ್ಲಿ 21 ಸಿನಿಪ್ಲೆಕ್ಸ್ಗಳಿವೆ. ರಾಜ್ಯದಲ್ಲಿ 38 ಮಲ್ಟಿಪ್ಲೆಕ್ಸ್ಗಳು ಮತ್ತು 40 ಮಾಲ್ಗಳಿವೆ. ಇದಲ್ಲದೆ ರಾಜ್ಯದಲ್ಲಿ 600ಕ್ಕೂ ಅಧಿಕ ಚಿತ್ರಮಂದಿರಗಳಿವೆ. ಅಲ್ಪಾವಧಿಗೆ ಈ ಮಾಲ್ಗಳು ಮತ್ತು ಮಲ್ಟಿಪ್ಲೆಕ್ಸ್<br />ಗಳು ಮುಚ್ಚಿದರೆ ಹೆಚ್ಚಿನ ಆರ್ಥಿಕ ನಷ್ಟ ಅನುಭವಿಸಲಿವೆ ಎಂದು ಆನಾರ್ಕ್ ರಿಟೇಲ್ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>