<p><strong>ಬೆಂಗಳೂರು: </strong>ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಲಾಕ್ಡೌನ್ನ ಮೊದಲ ದಿನ ರಾಜ್ಯದ ಹಲವೆಡೆ ಲಾಠಿಚಾರ್ಜ್ ನಡೆದಿದೆ.</p>.<p>ಸುಖಾಸುಮ್ಮನೆ ರಸ್ತೆಯಲ್ಲಿ ತಿರುಗಾಡಿದವರಿಗೆ ಪೊಲೀಸರು ಲಾಠಿ ಏಟಿನ ರುಚಿ ತೋರಿಸಿದ್ದಾರೆ.</p>.<p>ಬೆಳಗಾವಿ ನಗರದಲ್ಲಿ, ಚಿಕ್ಕೋಡಿಯಲ್ಲಿ ನಿಯಮ ಮೀರಿ ಹೊರಬಂದವರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಮೈಸೂರಿನ ವಾಜಮಂಗಲದಲ್ಲಿಯೂ ಇದೇ ಪುನರಾವರ್ತನೆಯಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/coronavirus-instances-increased-in-karnataka-715033.html" target="_blank">ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 51ಕ್ಕೆ,ಒಂದೇ ದಿನ 10 ಜನರಲ್ಲಿ ದೃಢ</a></p>.<p>ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಭಗತ್ ಸಿಂಗ್ ಸರ್ಕಲ್, ಗಂಜ್ ವೃತ್ತ, ಶಕ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಅನಗತ್ಯ ಹೊರಬಂದವರಿಗೆ ಲಾಠಿ ಬಿಸಿ ಮುಟ್ಟಿಸಿದ್ದಾರೆ.</p>.<p>ತುಮಕೂರು ನಗರದ ಬಿ.ಎಚ್.ರಸ್ತೆ ಮತ್ತು ಅಶೋಕ ರಸ್ತೆಯಲ್ಲಿಯೂ ಲಾಠಿಚಾರ್ಜ್ ನಡೆದಿದೆ. ಹುಬ್ಬಳ್ಳಿಯ ಚನ್ನಮ್ಮ ವೃತ್ತ, ದುರ್ಗದ ಬೈಲ್ ಮುಂತಾದ ಪ್ರದೇಶಗಳಲ್ಲಿ ವಾಹನಗಳಲ್ಲಿ ತಿರುಗಾಡುತ್ತಿದ್ದ ಕೆಲವರು ಪೊಲೀಸರ ಏಟು ತಿನ್ನಬೇಕಾಯಿತು.</p>.<p>ಚಿತ್ರದುರ್ಗ ಮಾರುಕಟ್ಟೆಯಲ್ಲಿ ಸೇರಿದ್ದ ಜನದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಲಾಠಿ ಬೀಸಿದ್ದರೆ, ದಾವಣಗೆರೆಯಲ್ಲಿ ಮಾಸ್ಕ್ ಇಲ್ಲದೇ ಹೊರ ಬಂದವರಿಗೆ ಎಚ್ಚರಿಕೆ ನೀಡಲಾಯಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/udupi-brahmavar-man-commits-suicide-after-reading-fake-news-in-social-media-on-coronavirus-715035.html" itemprop="url" target="_blank">ಕೊರೊನಾ ಭೀತಿ: ಸಾಮಾಜಿಕ ಮಾಧ್ಯಮಗಳ ವದಂತಿಗಳಿಂದ ಹೆದರಿ ವ್ಯಕ್ತಿ ಆತ್ಮಹತ್ಯೆ</a></p>.<p>ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಿಯಮ ಉಲ್ಲಂಘಿಸಿ ಹೊರಬಂದ ವಾಹನ ಸವಾರರಿಗೆ ಪೊಲೀಸರು ಲಾಠಿ ಬೀಸಿದ್ದಾರೆ.</p>.<p>ಶಿರಸಿಯಲ್ಲಿ ಪ್ರತಿ ವೃತ್ತದಲ್ಲಿ ಪೊಲೀಸರು ನಿಂತು ಸಾರ್ವಜನಿಕ ಸಂಚಾರದ ಮೇಲೆ ನಿಗಾ ವಹಿಸಿದ್ದಾರೆ. ವಾಹನ ಸಂಚಾರ ತೀರಾ ವಿರಳವಾಗಿತ್ತು. ಬೈಕ್ನಲ್ಲಿ ಓಡಾಡುತ್ತಿದ್ದ ಯುವಕರಿಗೆ ಪೊಲೀಸರಿಂದ ಲಾಠಿಯೇಟು ಬಿದ್ದಿದೆ.</p>.<p>ರಾಮನಗರದ ಮುಖ್ಯ ರಸ್ತೆಗಳಲ್ಲಿ ಪದೇ ಪದೇ ಬೈಕಿನಲ್ಲಿ ಓಡಾಡುತ್ತಿದ್ದ ಕೆಲ ಯುವಕರಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಚೆಕ್ ಪೋಸ್ಟ್ಗಳಲ್ಲಿ ನಿಗಾ ವಹಿಸಿದ್ದು, ಅನಗತ್ಯವಾಗಿ ಸಾರ್ವಜನಿಕರು ಓಡಾಡದಂತೆ ನಿರ್ಬಂಧ ಹೇರಿದ್ದಾರೆ.</p>.<p>ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಅನಗತ್ಯವಾಗಿ ಬೈಕ್ ಹಾಗೂ ಕಾರಿನಲ್ಲಿ ಓಡಾಟ ನಡೆಸುತ್ತಿದ್ದವರಿಗೆ ಪೊಲೀಸರು ಲಾಠಿ ತೋರಿಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದಾರೆ.</p>.<p>ಚಿಕ್ಕಬಳ್ಳಾಪುರದಲ್ಲಿ ಅನವಶ್ಯಕವಾಗಿ ಹೊರಗಡೆ ತಿರುಗುವವರಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಹೊಸಪೇಟೆಯಲ್ಲಿಯೂ ಲಾಠಿಚಾರ್ಜ್ ಮಾಡಲಾಗಿದೆ.</p>.<p>ಹಾಸನದಲ್ಲಿ ಮಾಸ್ಕ್ ಧರಿಸದೆ ಹೊರ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/transit-passes-in-bangalore-715020.html" itemprop="url" target="_blank">ಬೆಂಗಳೂರು ನಗರದಲ್ಲಿ ಸಂಚಾರ ಪಾಸ್ ವಿತರಣೆ ಆರಂಭ: ಯಾರಿಗೆಲ್ಲಾ ಪಾಸ್ ಲಭ್ಯ?</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಲಾಕ್ಡೌನ್ನ ಮೊದಲ ದಿನ ರಾಜ್ಯದ ಹಲವೆಡೆ ಲಾಠಿಚಾರ್ಜ್ ನಡೆದಿದೆ.</p>.<p>ಸುಖಾಸುಮ್ಮನೆ ರಸ್ತೆಯಲ್ಲಿ ತಿರುಗಾಡಿದವರಿಗೆ ಪೊಲೀಸರು ಲಾಠಿ ಏಟಿನ ರುಚಿ ತೋರಿಸಿದ್ದಾರೆ.</p>.<p>ಬೆಳಗಾವಿ ನಗರದಲ್ಲಿ, ಚಿಕ್ಕೋಡಿಯಲ್ಲಿ ನಿಯಮ ಮೀರಿ ಹೊರಬಂದವರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಮೈಸೂರಿನ ವಾಜಮಂಗಲದಲ್ಲಿಯೂ ಇದೇ ಪುನರಾವರ್ತನೆಯಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/coronavirus-instances-increased-in-karnataka-715033.html" target="_blank">ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 51ಕ್ಕೆ,ಒಂದೇ ದಿನ 10 ಜನರಲ್ಲಿ ದೃಢ</a></p>.<p>ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಭಗತ್ ಸಿಂಗ್ ಸರ್ಕಲ್, ಗಂಜ್ ವೃತ್ತ, ಶಕ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಅನಗತ್ಯ ಹೊರಬಂದವರಿಗೆ ಲಾಠಿ ಬಿಸಿ ಮುಟ್ಟಿಸಿದ್ದಾರೆ.</p>.<p>ತುಮಕೂರು ನಗರದ ಬಿ.ಎಚ್.ರಸ್ತೆ ಮತ್ತು ಅಶೋಕ ರಸ್ತೆಯಲ್ಲಿಯೂ ಲಾಠಿಚಾರ್ಜ್ ನಡೆದಿದೆ. ಹುಬ್ಬಳ್ಳಿಯ ಚನ್ನಮ್ಮ ವೃತ್ತ, ದುರ್ಗದ ಬೈಲ್ ಮುಂತಾದ ಪ್ರದೇಶಗಳಲ್ಲಿ ವಾಹನಗಳಲ್ಲಿ ತಿರುಗಾಡುತ್ತಿದ್ದ ಕೆಲವರು ಪೊಲೀಸರ ಏಟು ತಿನ್ನಬೇಕಾಯಿತು.</p>.<p>ಚಿತ್ರದುರ್ಗ ಮಾರುಕಟ್ಟೆಯಲ್ಲಿ ಸೇರಿದ್ದ ಜನದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಲಾಠಿ ಬೀಸಿದ್ದರೆ, ದಾವಣಗೆರೆಯಲ್ಲಿ ಮಾಸ್ಕ್ ಇಲ್ಲದೇ ಹೊರ ಬಂದವರಿಗೆ ಎಚ್ಚರಿಕೆ ನೀಡಲಾಯಿತು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/udupi-brahmavar-man-commits-suicide-after-reading-fake-news-in-social-media-on-coronavirus-715035.html" itemprop="url" target="_blank">ಕೊರೊನಾ ಭೀತಿ: ಸಾಮಾಜಿಕ ಮಾಧ್ಯಮಗಳ ವದಂತಿಗಳಿಂದ ಹೆದರಿ ವ್ಯಕ್ತಿ ಆತ್ಮಹತ್ಯೆ</a></p>.<p>ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಿಯಮ ಉಲ್ಲಂಘಿಸಿ ಹೊರಬಂದ ವಾಹನ ಸವಾರರಿಗೆ ಪೊಲೀಸರು ಲಾಠಿ ಬೀಸಿದ್ದಾರೆ.</p>.<p>ಶಿರಸಿಯಲ್ಲಿ ಪ್ರತಿ ವೃತ್ತದಲ್ಲಿ ಪೊಲೀಸರು ನಿಂತು ಸಾರ್ವಜನಿಕ ಸಂಚಾರದ ಮೇಲೆ ನಿಗಾ ವಹಿಸಿದ್ದಾರೆ. ವಾಹನ ಸಂಚಾರ ತೀರಾ ವಿರಳವಾಗಿತ್ತು. ಬೈಕ್ನಲ್ಲಿ ಓಡಾಡುತ್ತಿದ್ದ ಯುವಕರಿಗೆ ಪೊಲೀಸರಿಂದ ಲಾಠಿಯೇಟು ಬಿದ್ದಿದೆ.</p>.<p>ರಾಮನಗರದ ಮುಖ್ಯ ರಸ್ತೆಗಳಲ್ಲಿ ಪದೇ ಪದೇ ಬೈಕಿನಲ್ಲಿ ಓಡಾಡುತ್ತಿದ್ದ ಕೆಲ ಯುವಕರಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಚೆಕ್ ಪೋಸ್ಟ್ಗಳಲ್ಲಿ ನಿಗಾ ವಹಿಸಿದ್ದು, ಅನಗತ್ಯವಾಗಿ ಸಾರ್ವಜನಿಕರು ಓಡಾಡದಂತೆ ನಿರ್ಬಂಧ ಹೇರಿದ್ದಾರೆ.</p>.<p>ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಅನಗತ್ಯವಾಗಿ ಬೈಕ್ ಹಾಗೂ ಕಾರಿನಲ್ಲಿ ಓಡಾಟ ನಡೆಸುತ್ತಿದ್ದವರಿಗೆ ಪೊಲೀಸರು ಲಾಠಿ ತೋರಿಸಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದ್ದಾರೆ.</p>.<p>ಚಿಕ್ಕಬಳ್ಳಾಪುರದಲ್ಲಿ ಅನವಶ್ಯಕವಾಗಿ ಹೊರಗಡೆ ತಿರುಗುವವರಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಹೊಸಪೇಟೆಯಲ್ಲಿಯೂ ಲಾಠಿಚಾರ್ಜ್ ಮಾಡಲಾಗಿದೆ.</p>.<p>ಹಾಸನದಲ್ಲಿ ಮಾಸ್ಕ್ ಧರಿಸದೆ ಹೊರ ಬಂದವರಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/bengaluru-city/transit-passes-in-bangalore-715020.html" itemprop="url" target="_blank">ಬೆಂಗಳೂರು ನಗರದಲ್ಲಿ ಸಂಚಾರ ಪಾಸ್ ವಿತರಣೆ ಆರಂಭ: ಯಾರಿಗೆಲ್ಲಾ ಪಾಸ್ ಲಭ್ಯ?</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>