<p><strong>ಬೆಂಗಳೂರು:</strong>ರಾಜ್ಯದಲ್ಲಿ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆ ನಡುವಣ ಅವಧಿಯಲ್ಲಿ 267 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ವ್ಯಕ್ತಿಯೊಬ್ಬರುಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದರೊಂದಿಗೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4 ಸಾವಿರ ಗಡಿ ದಾಟಿದೆ.</p>.<p>ಇಂದು ದೃಢಪಟ್ಟ ಒಟ್ಟು ಪ್ರಕರಣಗಳ ಪೈಕಿ 250 ಮಂದಿ ಬೇರೆ ರಾಜ್ಯಗಳಿಂದ ಬಂದವರು ಎಂದು ಸಚಿವಾಲಯ ತಿಳಿಸಿದೆ. ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆಯಾಗಿದ್ದು, ಈವರೆಗೆ 53 ಜನ ಮೃತಪಟ್ಟಿದ್ದಾರೆ. 1,514 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/change-in-the-quarantine-system-dr-sudhakar-733205.html" itemprop="url">ಕ್ವಾರಂಟೈನ್ ವ್ಯವಸ್ಥೆಯಲ್ಲಿ ಬದಲಾವಣೆ: ಡಾ.ಸುಧಾಕರ</a></p>.<p>ಕಲಬುರ್ಗಿಯಲ್ಲಿ ಒಂದೇ ದಿನ 105 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 510ಕ್ಕೆ ಏರಿಕೆಯಾಗಿದೆ. ಮಂಡ್ಯದಲ್ಲಿ ಹೊಸದಾಗಿ 13 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 302ಕ್ಕೆ ಏರಿಕೆಯಾಗಿದೆ.</p>.<p>ಉಳಿದಂತೆ ಉಡುಪಿಯಲ್ಲಿ 62, ಬೆಂಗಳೂರಿನಲ್ಲಿ 20, ರಾಯಚೂರು 35, ಯಾದಗಿರಿ 9, ಹಾಸನ 1, ದಾವಣಗೆರೆ 3, ವಿಜಯಪುರ 6, ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ, ಶಿವಮೊಗ್ಗ, ಕೋಲಾರ ತಲಾ 2, ಬಳ್ಳಾರಿ, ಧಾರವಾಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ದೃಢಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ರಾಜ್ಯದಲ್ಲಿ ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆ ನಡುವಣ ಅವಧಿಯಲ್ಲಿ 267 ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ. ವ್ಯಕ್ತಿಯೊಬ್ಬರುಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದರೊಂದಿಗೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4 ಸಾವಿರ ಗಡಿ ದಾಟಿದೆ.</p>.<p>ಇಂದು ದೃಢಪಟ್ಟ ಒಟ್ಟು ಪ್ರಕರಣಗಳ ಪೈಕಿ 250 ಮಂದಿ ಬೇರೆ ರಾಜ್ಯಗಳಿಂದ ಬಂದವರು ಎಂದು ಸಚಿವಾಲಯ ತಿಳಿಸಿದೆ. ಸದ್ಯ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,063ಕ್ಕೆ ಏರಿಕೆಯಾಗಿದ್ದು, ಈವರೆಗೆ 53 ಜನ ಮೃತಪಟ್ಟಿದ್ದಾರೆ. 1,514 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/change-in-the-quarantine-system-dr-sudhakar-733205.html" itemprop="url">ಕ್ವಾರಂಟೈನ್ ವ್ಯವಸ್ಥೆಯಲ್ಲಿ ಬದಲಾವಣೆ: ಡಾ.ಸುಧಾಕರ</a></p>.<p>ಕಲಬುರ್ಗಿಯಲ್ಲಿ ಒಂದೇ ದಿನ 105 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 510ಕ್ಕೆ ಏರಿಕೆಯಾಗಿದೆ. ಮಂಡ್ಯದಲ್ಲಿ ಹೊಸದಾಗಿ 13 ಮಂದಿಯಲ್ಲಿ ಕೋವಿಡ್-19 ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 302ಕ್ಕೆ ಏರಿಕೆಯಾಗಿದೆ.</p>.<p>ಉಳಿದಂತೆ ಉಡುಪಿಯಲ್ಲಿ 62, ಬೆಂಗಳೂರಿನಲ್ಲಿ 20, ರಾಯಚೂರು 35, ಯಾದಗಿರಿ 9, ಹಾಸನ 1, ದಾವಣಗೆರೆ 3, ವಿಜಯಪುರ 6, ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ, ಶಿವಮೊಗ್ಗ, ಕೋಲಾರ ತಲಾ 2, ಬಳ್ಳಾರಿ, ಧಾರವಾಡ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ದೃಢಪಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>