ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 313 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು; 82 ಮಂದಿ ಗುಣಮುಖ 

Last Updated 16 ಏಪ್ರಿಲ್ 2020, 7:15 IST
ಅಕ್ಷರ ಗಾತ್ರ

ಬೆಂಗಳೂರು: ಏಪ್ರಿಲ್‌ 15ರ ಸಂಜೆ 5ರಿಂದ ಏಪ್ರಿಲ್‌ 16ರ ಮಧ್ಯಾಹ್ನ 12ರ ವರೆಗೂ ರಾಜ್ಯದಲ್ಲಿ ಕೋವಿಡ್‌–19 ದೃಢಪಟ್ಟ 34 ಹೊಸ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಈವರೆಗೂ ಒಟ್ಟು 313 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿದ್ದು, ಸಾವಿಗೀಡಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ಈವರೆಗೂ 82 ಮಂದಿ ಗುಣಮುಖರಾಗಿದ್ದಾರೆ.

ಬೆಂಗಳೂರಿನ 66 ವರ್ಷ ವಯಸ್ಸಿನ ಸೋಂಕಿತ ವ್ಯಕ್ತಿಯೊಬ್ಬರು ಬುಧವಾರ ಮೃತಪಟ್ಟಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಏಪ್ರಿಲ್‌ 10ರಿಂದ ವೆಂಟಿಲೇಟರ್‌ ವ್ಯವಸ್ಥೆ ಪಡೆದಿದ್ದರು.

ಬೆಂಗಳೂರಿನ 4 ಮಂದಿ, ಮೈಸೂರಿನ ಮೂವರು, ಬೆಳಗಾವಿಯ 17 ಮಂದಿ, ವಿಜಯಪುರದ 7 ಮಂದಿ, ಕಲಬುರ್ಗಿ ಹಾಗೂ ಗದಗದ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT