ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರ ಓಡಾಟದ ಬಗ್ಗೆ ಕಠಿಣ ಕ್ರಮ ಜರುಗಿಸಿ: ಬಿಎಸ್‌ವೈಗೆ ಪ್ರಧಾನಿ ಮೋದಿ ಸೂಚನೆ

Last Updated 27 ಮಾರ್ಚ್ 2020, 11:52 IST
ಅಕ್ಷರ ಗಾತ್ರ

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ್ದರೂ ಕರ್ನಾಟಕದಲ್ಲಿ ಜನರು ಓಡಾಟ ನಡೆಸುತ್ತಿರುವುದು ಸರಿಯಲ್ಲ. ಈ ಬಗ್ಗೆ ಕಠಿಣ ಕ್ರಮ ಜರುಗಿಸಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಪ್ರಧಾನಿ ಮೋದಿ ಸೂಚಿಸಿದ್ದಾರೆ.

ಕೊರೊನಾ ಸೋಂಕು ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌. 14ರ ವರೆಗೂ ರಾಷ್ಟ್ರವ್ಯಾಪಿ ಲಾಕ್‌ಡೌನ್‌ ಮಾಡುವುದು ಅನಿವಾರ್ಯ ಎಂದು ಮೋದಿ ಹೇಳಿದ್ದರು. ಆ ನಿಟ್ಟಿನಲ್ಲಿ ಕರ್ನಾಟಕದಲ್ಲಿಯೂ ಕೊರೊನಾ ಸೋಂಕಿತರ ಪಟ್ಟಿ ಏರತ್ತಲೇ ಇರುವುದು ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಜನರ ಓಡಾಟವನ್ನು ಗಂಭೀರವಾಗಿ ಪರಿಗಣಿಸಿ, ಕಠಿಣ ಕ್ರಮ ಜರುಗಿಸಲು ಆದೇಶಿಸಿದ್ದಾರೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉಸ್ತುವಾರಿ ಸಚಿವರಿಗೆ ಆಯಾ ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಿಸುವ ಜವಾಬ್ದಾರಿಯನ್ನು ಹೊರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT