‘ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ಡೌನ್ ಇರುವ ಕಾರಣ ಜನರು ಮನೆಯಿಂದ ಹೊರಗೆ ಬರುವಂತಿಲ್ಲ. ಹಳ್ಳಿಗರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ, ದೈನಂದಿನ ಬಳಕೆಗೆ ಅವಶ್ಯವಿರುವ ಸಾಮಗ್ರಿಗಳನ್ನು ಟಿಎಸ್ಎಸ್ ಪೂರೈಕೆ ಮಾಡುತ್ತದೆ. ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ದಿನಸಿ ಸಾಮಗ್ರಿಗಳನ್ನು ತಂದು, ಪ್ಯಾಕಿಂಗ್ ಮಾಡಿ ಕಳುಹಿಸಲಾಗಿದೆ. ಸಾಮಗ್ರಿಗಳ ಸರಬರಾಜಿಗೆ ಸಿಬ್ಬಂದಿ ತಂಡ ರಚಿಸಲಾಗಿದೆ’ ಎನ್ನುತ್ತಾರೆ ಟಿಎಸ್ಎಸ್ ವ್ಯವಸ್ಥಾಪಕ ರವೀಶ ಹೆಗಡೆ.