ತಾಲ್ಲೂಕಿನ ಕದಬಹಳ್ಳಿಯ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆ, ಕೋಟೆ ಬೆಟ್ಟ, ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದರು. ಸ್ಥಳ ಪರಿಶೀಲನೆಗೆ ಬಂದ ಸಚಿವ ಕೆ.ಸಿ.ನಾರಾಯಣಗೌಡರ ಕಾರಿಗೆ ಜನರು ಮುತ್ತಿಗೆ ಹಾಕಿದರು. ಇಲ್ಲಿ ಕ್ವಾರಂಟೈನ್ ಮಾಡುವುದು ಬೇಡ ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಚಿವರು ಹಾಗೂ ಜನರ ನಡುವೆ ವಾಗ್ವಾದ ನಡೆಯಿತು.