ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್‌ ಕೇಂದ್ರ: ಸಚಿವರ ಜೊತೆ ಸ್ಥಳೀಯರ ಮಾತಿನ ಚಕಮಕಿ

Last Updated 5 ಮೇ 2020, 15:48 IST
ಅಕ್ಷರ ಗಾತ್ರ

ನಾಗಮಂಗಲ: ಮುಂಬೈನಿಂದ ಬಂದಿರುವ ವಲಸಿಗರನ್ನು ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್‌ ಮಾಡುವ ವಿಚಾರದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಹಾಗೂ ಸ್ಥಳೀಯರ ನಡುವೆ ಮಂಗಳವಾರ ಮಾತಿನ ಚಕಮಕಿ ನಡೆಯಿತು.

ಬೇರೆ ತಾಲ್ಲೂಕುಗಳ ಜನರನ್ನು ಪಟ್ಟಣದ ವಿವಿಧೆಡೆ ಕ್ವಾರಂಟೈನ್‌ ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿದ್ದ ಕಾರಣ ಗೊಂದಲಕ್ಕೆ ಕಾರಣವಾಗಿತ್ತು.

ತಾಲ್ಲೂಕಿನ ಕದಬಹಳ್ಳಿಯ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆ, ಕೋಟೆ ಬೆಟ್ಟ, ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದರು. ಸ್ಥಳ ಪರಿಶೀಲನೆಗೆ ಬಂದ ಸಚಿವ ಕೆ.ಸಿ.ನಾರಾಯಣಗೌಡರ ಕಾರಿಗೆ ಜನರು ಮುತ್ತಿಗೆ ಹಾಕಿದರು. ಇಲ್ಲಿ ಕ್ವಾರಂಟೈನ್‌ ಮಾಡುವುದು ಬೇಡ ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಚಿವರು ಹಾಗೂ ಜನರ ನಡುವೆ ವಾಗ್ವಾದ ನಡೆಯಿತು.

ತಾಳ್ಮೆ ಕಳೆದುಕೊಂಡ ಸಚಿವರು, ‘ಗೂಂಡಾಗಳ ರೀತಿಯಲ್ಲಿ ವರ್ತಿಸಬೇಡಿ, ಇಂತಹ ಗೊಡ್ಡು ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ನಾನು ಕೋವಿಡ್‌ ರೋಗಿಗಳನ್ನು ಹಾಸ್ಟೆಲ್‌ಗೆ ಕರೆದುಕೊಂಡು ಬಂದಿಲ್ಲ. ನಿಮಗೆ ನಾನು ಉತ್ತರ ನೀಡಬೇಕಾಗಿಲ್ಲ. ನಿಮ್ಮ ಶಾಸಕರು ಕೇಳುತ್ತಾರೆ ಬಿಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಶಾಸಕ ಕೆ.ಸುರೇಶ್‌ಗೌಡ ‘ಬೇರೆ ತಾಲ್ಲೂಕುಗಳ ವಲಸಿಗರನ್ನು ತಂದು ಇಲ್ಲಿ ಹಾಕುವುದಕ್ಕೆ ನಾವು ಬಿಡುವುದಿಲ್ಲ, ಕ್ವಾರಂಟೈನ್‌ ಕೇಂದ್ರ ಮಾಡುವುದಿದ್ದರೆ ನಮ್ಮ ಹೆಣದ ಮೇಲೆ ಮಾಡಲಿ. ಬೇರೆ ವಲಸಿಗರು ನಮ್ಮ ತಾಲ್ಲೂಕಿಗೆ ಬರುವುದು ಬೇಡ’ ಎಂದರು.

‘ನಿಮ್ಮ ತಾಲ್ಲೂಕಿನ ಜನರನ್ನೇ ಕ್ವಾರಂಟೈನ್‌ ಮಾಡಲಾಗುತ್ತಿದೆ. ಇದಕ್ಕೆ ವಿರೋಧ ಏಕೆ’ ಎಂದು ಸಚಿವರು ಪ್ರಶ್ನಿಸಿದರು. ನಂತರ ಪರಿಸ್ಥಿತಿ ಶಾಂತವಾಯಿತು. ಅಧಿಕಾರಿಗಳು ಸಿದ್ಧತಾ ಕಾರ್ಯ ಮುಂದುವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT