<p><strong>ಚಾಮರಾಜನಗರ:</strong> ಕೊರೊನಾ ವೈರಸ್ ಹರಡುವುದನ್ನು ತಡೆಯುವ ಪ್ರಯತ್ನವಾಗಿ ತಾಲ್ಲೂಕಿನ ಹೊಂಗನೂರು ಗ್ರಾಮದ ನಾಯಕ ಸಮುದಾಯದ ಯಜಮಾನರು ನಿರ್ಣಯವೊಂದನ್ನು ಕೈಗೊಂಡಿದ್ದು, ಸಮುದಾಯದ ಜನ ಅನಗತ್ಯವಾಗಿ ಮನೆಯಿಂದ ಹೊರಗಡೆ ಬಂದು ಗುಂಪು ಸೇರಿದರೆ ₹ 1000 ದಂಡ ಹಾಕುವುದಾಗಿ ಘೋಷಿಸಿದ್ದಾರೆ.</p>.<p>ಹೊಂಗನೂರಿನ ನಾಯಕರ ಬೀದಿಗಳಲ್ಲಿ 350 ಮನೆಗಳಿವೆ. ನಿರ್ಣಯದ ಬಗ್ಗೆ ಬೀದಿಯಲ್ಲಿ ಧ್ವನಿ ವರ್ಧಕದಲ್ಲಿ ಘೋಷಣೆಯನ್ನೂ ಮಾಡಲಾಗಿದೆ.</p>.<p>'ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಜನರು ಕೂಡ ಸರ್ಕಾರಕ್ಕೆ ಸಹಕಾರ ನೀಡಬೇಕು. ಈ ಉದ್ದೇಶದಿಂದ ಬುಧವಾರ ಬೆಳಿಗ್ಗೆ ಸಮುದಾಯದ ಯಜಮಾನರು ಸಭೆ ಸೇರಿ ಈ ನಿರ್ಣಯಕ್ಕೆ ಬಂದಿದ್ದಾರೆ' ಎಂದು ಸಮುದಾಯದ ಮುಖಂಡ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದ್ರು ಅವರು 'ಪ್ರಜಾವಾಣಿ'ಗೆ ತಿಳಿಸಿದರು.</p>.<p>ಅಗತ್ಯ ವಸ್ತುಗಳ ಖರೀದಿಗಾಗಿ ಒಬ್ಬೊಬ್ಬರು ಹೊರಗಡೆ ಬರಬಹುದು. ಆದರೆ ಮೂರು ಜನರಿಗಿಂತ ಜಾಸ್ತಿ ಅನಗತ್ಯವಾಗಿ ಗುಂಪು ಕೂಡುವಂತಿಲ್ಲ. ದಂಡದ ಭಯಕ್ಕಾದರೂ ಜನರು ಹೊರಗಡೆ ಬರದಿರಲಿ ಎಂಬುದು ನಿರ್ಣಯದ ಉದ್ದೇಶ' ಎಂದರು.</p>.<p><strong>ವಸ್ತುಗಳ ಖರೀದಿಗೆ ಸಮಯ ನಿಗದಿ</strong></p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಪಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.</p>.<p>ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಮತ್ತು ಸಂಜೆ 5ರಿಂದ 7ರವರೆಗೆ ಸಮಯ ನಿಗದಿ ಪಡಿಸಲಾಗಿದೆ. ಈ ಅವಧಿಯಲ್ಲಿ ಮಾತ್ರ ಅಂಗಡಿಗಳು ತೆರೆಯಲಿದ್ದು, ಜನರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕೊರೊನಾ ವೈರಸ್ ಹರಡುವುದನ್ನು ತಡೆಯುವ ಪ್ರಯತ್ನವಾಗಿ ತಾಲ್ಲೂಕಿನ ಹೊಂಗನೂರು ಗ್ರಾಮದ ನಾಯಕ ಸಮುದಾಯದ ಯಜಮಾನರು ನಿರ್ಣಯವೊಂದನ್ನು ಕೈಗೊಂಡಿದ್ದು, ಸಮುದಾಯದ ಜನ ಅನಗತ್ಯವಾಗಿ ಮನೆಯಿಂದ ಹೊರಗಡೆ ಬಂದು ಗುಂಪು ಸೇರಿದರೆ ₹ 1000 ದಂಡ ಹಾಕುವುದಾಗಿ ಘೋಷಿಸಿದ್ದಾರೆ.</p>.<p>ಹೊಂಗನೂರಿನ ನಾಯಕರ ಬೀದಿಗಳಲ್ಲಿ 350 ಮನೆಗಳಿವೆ. ನಿರ್ಣಯದ ಬಗ್ಗೆ ಬೀದಿಯಲ್ಲಿ ಧ್ವನಿ ವರ್ಧಕದಲ್ಲಿ ಘೋಷಣೆಯನ್ನೂ ಮಾಡಲಾಗಿದೆ.</p>.<p>'ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಜನರು ಕೂಡ ಸರ್ಕಾರಕ್ಕೆ ಸಹಕಾರ ನೀಡಬೇಕು. ಈ ಉದ್ದೇಶದಿಂದ ಬುಧವಾರ ಬೆಳಿಗ್ಗೆ ಸಮುದಾಯದ ಯಜಮಾನರು ಸಭೆ ಸೇರಿ ಈ ನಿರ್ಣಯಕ್ಕೆ ಬಂದಿದ್ದಾರೆ' ಎಂದು ಸಮುದಾಯದ ಮುಖಂಡ, ತಾಲ್ಲೂಕು ಪಂಚಾಯಿತಿ ಸದಸ್ಯ ಚಂದ್ರು ಅವರು 'ಪ್ರಜಾವಾಣಿ'ಗೆ ತಿಳಿಸಿದರು.</p>.<p>ಅಗತ್ಯ ವಸ್ತುಗಳ ಖರೀದಿಗಾಗಿ ಒಬ್ಬೊಬ್ಬರು ಹೊರಗಡೆ ಬರಬಹುದು. ಆದರೆ ಮೂರು ಜನರಿಗಿಂತ ಜಾಸ್ತಿ ಅನಗತ್ಯವಾಗಿ ಗುಂಪು ಕೂಡುವಂತಿಲ್ಲ. ದಂಡದ ಭಯಕ್ಕಾದರೂ ಜನರು ಹೊರಗಡೆ ಬರದಿರಲಿ ಎಂಬುದು ನಿರ್ಣಯದ ಉದ್ದೇಶ' ಎಂದರು.</p>.<p><strong>ವಸ್ತುಗಳ ಖರೀದಿಗೆ ಸಮಯ ನಿಗದಿ</strong></p>.<p>ಲಾಕ್ಡೌನ್ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ ಪಡಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.</p>.<p>ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಮತ್ತು ಸಂಜೆ 5ರಿಂದ 7ರವರೆಗೆ ಸಮಯ ನಿಗದಿ ಪಡಿಸಲಾಗಿದೆ. ಈ ಅವಧಿಯಲ್ಲಿ ಮಾತ್ರ ಅಂಗಡಿಗಳು ತೆರೆಯಲಿದ್ದು, ಜನರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>