‘ಕೇರಳದ ಕಾಸರಗೋಡಿನಲ್ಲಿ ಕೊರೊನಾ ವೈರಸ್ ಸೋಂಕು (ಕೋವಿಡ್–19) ವ್ಯಾಪಕವಾಗಿ ಹರಡಿದೆ. ಈ ಕುರಿತು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮಂಗಳೂರು ಶಾಖೆ ಒದಗಿಸಿರುವ ಅಂಕಿ ಅಂಶ ಭಯಾನಕವಾಗಿದೆ. ನಿಜ ಹೇಳಬೇಕೆಂದರೆ ಕಾಸರಗೋಡಿನಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣ ದಾಖಲಾಗಿವೆ. ಭಾರತೀಯ ವೈದ್ಯಕೀಯ ಸಮಿತಿ ಸೇರಿದಂತೆ ಆರೋಗ್ಯ ಸಂಬಂಧಿ ಸಂಸ್ಥೆಗಳೂ ಗಡಿ ಭಾಗಗಳನ್ನು ಕಟ್ಟುನಿಟ್ಟಾದ ದಿಗ್ಬಂಧನಕ್ಕೆ ಒಳಪಡಿಸಬೇಕೆಂದು ಅಭಿಪ್ರಾಯಪಟ್ಟಿವೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ಗಡಿ ಸಂಚಾರ ಬಂದ್ ಮಾಡುವ ನಿರ್ಧಾರ ಕೈಗೊಂಡಿದೆ. ಮಾನವೀಯ ನೆಲೆಯಲ್ಲಿ, ಕೇರಳದ ಸಹೋದರ–ಸಹೋದರಿಯರ ಆರೋಗ್ಯ ಕಾಪಾಡಬೇಕೆಂಬ ಕಳಕಳಿ ನನಗೂ ಇದೆ. ಆದರೆ, ಅಂತಃಕರಣದ ನೆಲೆಯಲ್ಲಿ ನಿರ್ಧಾರ ಕೈಗೊಂಡರೆ ರಾಜ್ಯದ ಜನರ ಶಾಂತಿ–ನೆಮ್ಮದಿ ಹಾಳಾಗಲಿದೆ’ ಎಂದು ದೇವೇಗೌಡರಿಗೆ ಬರೆದಿರುವ ಪತ್ರದಲ್ಲಿ ಯಡಿಯೂರಪ್ಪ ಉಲ್ಲೇಖಿಸಿದ್ದಾರೆ.