‘ಕೋವಿಡ್–19 ಮೂರು ಮತ್ತು ನಾಲ್ಕನೇ ಹಂತಕ್ಕೆ ವ್ಯಾಪಿಸಿದರೆ ರೋಗಿಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಆಸ್ಪತ್ರೆಗಳ ಕೊರತೆ ಉಂಟಾಗಲಿದೆ. ಈ ನಿಟ್ಟಿನಲ್ಲಿ ಬೋಗಿಗಳನ್ನೇ ಸಂಚಾರಿ ಆಸ್ಪತ್ರೆ ಮಾದರಿಯಲ್ಲಿ ಮಾರ್ಪಾಡು ಮಾಡಲಾಗುತ್ತಿದೆ. ಮೈಸೂರು ಮತ್ತು ಹುಬ್ಬಳ್ಳಿ ವರ್ಕ್ಶಾಪ್ನಲ್ಲಿ ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ’ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ‘ಪ್ರಜಾವಾಣಿ’ಗೆ ತಿಳಿಸಿದರು.