<p><strong>ಬೆಂಗಳೂರು:</strong> ಏಪ್ರಿಲ್ 20ರ ಸಂಜೆ 5ರಿಂದ ಏಪ್ರಿಲ್ 21ರ ಸಂಜೆ 5ರವರೆಗೂ ರಾಜ್ಯದಲ್ಲಿ ಕೋವಿಡ್–19 ದೃಢಪಟ್ಟ 10 ಹೊಸ ಪ್ರಕರಣಗಳು ದಾಖಲಾಗಿವೆ.</p>.<p>ವಿಜಯಪುರ, ಕಲಬುರ್ಗಿಯಲ್ಲಿ ತಲಾ 3, ನಂಜನಗೂಡಿನಲ್ಲಿ 2, ದಕ್ಷಿಣ ಕನ್ನಡ ಹಾಗೂ ಬೆಳಗಾವಿಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.</p>.<p>ರಾಜ್ಯದಲ್ಲಿ ಈವರೆಗೂ ಒಟ್ಟು 418 ಕೊರೊನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 280 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 129 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಕಲಬುರ್ಗಿಯ ಮೂವರಲ್ಲಿ ಇಬ್ಬರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು,ಒಬ್ಬರಮಾಹಿತಿ ಲಭ್ಯವಾಗಿಲ್ಲ. ವಿಜಯಪುರದ ಮೂವರು ರೋಗಿ–306ರ ಸಂಪರ್ಕಕ್ಕೆ ಬಂದವರಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಪತ್ತೆಯಾಗಿರುವ ಸೋಂಕಿತರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ.</p>.<p>ನಂಜನಗೂಡಿನ ಎರಡು ಪ್ರಕರಣಗಳು ಸೋಂಕಿತರ ದ್ವೀತಿಯ ಸಂಪರ್ಕದಿಂದ ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಸಂಜೆಯಹೆಲ್ತ್ ಬುಲೆಟಿನಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಏಪ್ರಿಲ್ 20ರ ಸಂಜೆ 5ರಿಂದ ಏಪ್ರಿಲ್ 21ರ ಸಂಜೆ 5ರವರೆಗೂ ರಾಜ್ಯದಲ್ಲಿ ಕೋವಿಡ್–19 ದೃಢಪಟ್ಟ 10 ಹೊಸ ಪ್ರಕರಣಗಳು ದಾಖಲಾಗಿವೆ.</p>.<p>ವಿಜಯಪುರ, ಕಲಬುರ್ಗಿಯಲ್ಲಿ ತಲಾ 3, ನಂಜನಗೂಡಿನಲ್ಲಿ 2, ದಕ್ಷಿಣ ಕನ್ನಡ ಹಾಗೂ ಬೆಳಗಾವಿಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.</p>.<p>ರಾಜ್ಯದಲ್ಲಿ ಈವರೆಗೂ ಒಟ್ಟು 418 ಕೊರೊನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಸಾವಿಗೀಡಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 280 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 129 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಕಲಬುರ್ಗಿಯ ಮೂವರಲ್ಲಿ ಇಬ್ಬರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು,ಒಬ್ಬರಮಾಹಿತಿ ಲಭ್ಯವಾಗಿಲ್ಲ. ವಿಜಯಪುರದ ಮೂವರು ರೋಗಿ–306ರ ಸಂಪರ್ಕಕ್ಕೆ ಬಂದವರಾಗಿದ್ದಾರೆ. ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಪತ್ತೆಯಾಗಿರುವ ಸೋಂಕಿತರು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ.</p>.<p>ನಂಜನಗೂಡಿನ ಎರಡು ಪ್ರಕರಣಗಳು ಸೋಂಕಿತರ ದ್ವೀತಿಯ ಸಂಪರ್ಕದಿಂದ ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ಸಂಜೆಯಹೆಲ್ತ್ ಬುಲೆಟಿನಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>