ಮೈಸೂರು: ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಭೂಸ್ವಾಧೀನಕ್ಕಾಗಿ ನಾಲ್ವರು ಭೂಮಾಲೀಕರಿಗೆ ಹೆಚ್ಚುವರಿ ಭೂಪರಿಹಾರ ₹ 8.83 ಕೋಟಿ ನೀಡದಿರುವುದಕ್ಕೆ ಪಾಲಿಕೆ ಆಯುಕ್ತರ ಕಚೇ ರಿಯ ಪೀಠೋಪಕರಣಗಳನ್ನು ಜಪ್ತಿ ಮಾಡಲು ಇಲ್ಲಿನ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
ನ್ಯಾಯಾಲಯದ ಸಿಬ್ಬಂದಿ ಆದೇಶದ ಪ್ರತಿ ಹಿಡಿದು ಸೋಮವಾರ ಆಯುಕ್ತರ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಹೊರಗಡೆ ಹಾಕಿದರು. ಈ ವೇಳೆ ಅಧಿಕಾರಿಗಳು 60 ದಿನಗಳ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಬಳಿಕ ಜಪ್ತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.