‘ಪಾದರಾಯನಪುರದಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಂಥ ಸಂದರ್ಭದಲ್ಲೇ ಅನುಮತಿ ಇಲ್ಲದೆ ಮೆರವಣಿಗೆ ಮಾಡಲಾಗಿದೆ. ಅಕ್ರಮವಾಗಿ ಗುಂಪು ಸೇರಿದ್ದ, ಸಾಂಕ್ರಾಮಿಕ ರೋಗ ಹರಡಲು ಯತ್ನಿಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿದಡಿ ಇಮ್ರಾನ್ ಪಾಷಾ ಸೇರಿ 22 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವರೆಲ್ಲರನ್ನೂ ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ರಮೇಶ್ ಬಾನೊತ್ ತಿಳಿಸಿದರು.