ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಕಳೆದ ವಿಧಾನಸಭಾ ಉಪ ಚುನಾವಣೆ ವೇಳೆ ಆರ್.ಶಂಕರ್ ಸ್ಪರ್ಧೆ ಮಾಡಿರಲಿಲ್ಲ. ಆಗ ಅವರಿಗೆ ಪರಿಷತ್ ಚುನಾವಣಾ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತು. ಅದರಂತೆ ಅವರಿಗೆ ಈಗ ಟಿಕೆಟ್ ದೊರೆಯಲಿದೆ. ಆದರೆ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್, ಸಿ.ಪಿ. ಯೋಗೇಶ್ ಅವರಿಗೆ ಟಿಕೆಟ್ ಕೊಡುವ ಯಾವುದೇ ಭರವಸೆ ನೀಡಿರಲಿಲ್ಲ’ ಎಂದು ಹೇಳಿದರು.