‘ಜೀವ ವಿಮೆ, ಬ್ಯಾಂಕ್, ಸಾರ್ವಜನಿಕ ವಲಯದ ಉದ್ದಿಮೆಗಳ ಖಾಸಗೀಕರಣ ಕೈಬಿಡಬೇಕು. ತಿಂಗಳಿಗೆ ₹18 ಸಾವಿರ ಕನಿಷ್ಠ ಕೂಲಿ ನಿಗದಿಪಡಿಸಬೇಕು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡುವಂತೆ ಒತ್ತಾಯಿಸಿ ಸುಮಾರು 18 ಕೋಟಿ ಜನರು ಮುಷ್ಕರದಲ್ಲಿ ಪಾಳ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದುವರೆಗೆ ರಾಷ್ಟ್ರವ್ಯಾಪಿ ಮೂರು ಮುಷ್ಕರಗಳನ್ನು ನಡೆಸಲಾಗಿದ್ದು, ಇದು ನಾಲ್ಕನೆಯದ್ದಾಗಿದೆ’ ಎಂದರು.