ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಾಕ್ಷನಾಶ, ಸಾಕ್ಷಿಗಳಿಗೆ ಬೆದರಿಕೆ ಒಡ್ಡಿದ ಆರೋಪದಡಿ ಡಿವೈಎಸ್ಪಿಗಳಾದ ತುಳಜಪ್ಪ ಸುಲ್ಫಿ, ಬಿ.ಪಿ.ಚಂದ್ರಶೇಖರ ಮತ್ತು ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲಿಸಿ, ವಿಚಾರಣೆ ನಡೆಸುವಂತೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಸೂಚಿಸಿದೆ.