<p><strong>ಬೆಂಗಳೂರು</strong>: ಕೊರೊನಾ ಸೋಂಕು ಶಂಕಿತ ವ್ಯಕ್ತಿ ಮೃತಪಟ್ಟ ಆರು ಗಂಟೆಗಳೊಳಗೆ ಅವರ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ, ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.</p>.<p>ಇಲಾಖೆಯು ಜೂ.8ರಂದು ಕೋವಿಡ್ ಪರೀಕ್ಷೆ ಸಂಬಂಧ ಪ್ರಕಟಿಸಿದ್ದ ಪರಿಷ್ಕೃತ ಮಾರ್ಗಸೂಚಿಯಲ್ಲಿ ಮೃತ ವ್ಯಕ್ತಿಗಳ ಕೋವಿಡ್ ಪರೀಕ್ಷೆಯ ಬಗ್ಗೆ ಉಲ್ಲೇಖಿಸಿರಲಿಲ್ಲ. ಇದರಿಂದಾಗಿ ಗೊಂದಲ ಉಂಟಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಇಲಾಖೆ, ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಹಾಗೂ ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ (ಐಎಲ್ಐ) ಬಳಲಿ, ಮೃತಪಟ್ಟ ವ್ಯಕ್ತಿಗಳಿಗೆ ಮೊದಲಿನಂತೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಿದೆ.</p>.<p>ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ ಐಎಲ್ಐ ಹಾಗೂ ಸಾರಿ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಹಾಗೂ ಮೃತಪಟ್ಟವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು. ವಿದೇಶ ಹಾಗೂ ಅನ್ಯರಾಜ್ಯಗಳಿಂದ ಬಂದವರಲ್ಲಿಯೂ ಈ ಮಾದರಿಯ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಲಾಗುವುದು. ಅದೇ ರೀತಿ, ಕಂಟೈನ್ಮೆಂಟ್ ವಲಯ ಹಾಗೂ ಬಫರ್ ವಲಯದ ನಿವಾಸಿಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.</p>.<p>ಪರೀಕ್ಷೆಯ ಬಳಿಕ ಮೃತ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಲ್ಲಿ ನೇರ ಹಾಗೂ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಿ, ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗುವುದು. ಅಷ್ಟೇ ಅಲ್ಲ, ಅವರಿಗೆ ಕೂಡ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊರೊನಾ ಸೋಂಕು ಶಂಕಿತ ವ್ಯಕ್ತಿ ಮೃತಪಟ್ಟ ಆರು ಗಂಟೆಗಳೊಳಗೆ ಅವರ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ, ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.</p>.<p>ಇಲಾಖೆಯು ಜೂ.8ರಂದು ಕೋವಿಡ್ ಪರೀಕ್ಷೆ ಸಂಬಂಧ ಪ್ರಕಟಿಸಿದ್ದ ಪರಿಷ್ಕೃತ ಮಾರ್ಗಸೂಚಿಯಲ್ಲಿ ಮೃತ ವ್ಯಕ್ತಿಗಳ ಕೋವಿಡ್ ಪರೀಕ್ಷೆಯ ಬಗ್ಗೆ ಉಲ್ಲೇಖಿಸಿರಲಿಲ್ಲ. ಇದರಿಂದಾಗಿ ಗೊಂದಲ ಉಂಟಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಇಲಾಖೆ, ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಹಾಗೂ ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ (ಐಎಲ್ಐ) ಬಳಲಿ, ಮೃತಪಟ್ಟ ವ್ಯಕ್ತಿಗಳಿಗೆ ಮೊದಲಿನಂತೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಿದೆ.</p>.<p>ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ ಐಎಲ್ಐ ಹಾಗೂ ಸಾರಿ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಹಾಗೂ ಮೃತಪಟ್ಟವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಬೇಕು. ವಿದೇಶ ಹಾಗೂ ಅನ್ಯರಾಜ್ಯಗಳಿಂದ ಬಂದವರಲ್ಲಿಯೂ ಈ ಮಾದರಿಯ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಲಾಗುವುದು. ಅದೇ ರೀತಿ, ಕಂಟೈನ್ಮೆಂಟ್ ವಲಯ ಹಾಗೂ ಬಫರ್ ವಲಯದ ನಿವಾಸಿಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದೆ.</p>.<p>ಪರೀಕ್ಷೆಯ ಬಳಿಕ ಮೃತ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಲ್ಲಿ ನೇರ ಹಾಗೂ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಿ, ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸಲಾಗುವುದು. ಅಷ್ಟೇ ಅಲ್ಲ, ಅವರಿಗೆ ಕೂಡ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>